ಶಿರಹಟ್ಟಿ: ತಾಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ.
ಘಟನೆಯ ವಿವರ: ಕಡಕೋಳ ಗ್ರಾಮದ ನಿವಾಸಿಗಳಾದ ಕುಮಾರ(24), ಶರಣಪ್ಪ (38) ಮಾರುತಿ(50) ಹೊಲ ನೋಡಿ ಬರಲು ಹೋಗಿದ್ದು, ಮಳೆ, ಗಾಳಿ ಪ್ರಾರಂಭವಾಗಿದ್ದರಿಂದ ಅಲ್ಲಿಯೇ ಗಿಡದ ಮರೆಯಲ್ಲಿ ನಿಂತುಕೊಂಡಿದ್ದಾರೆ. ದುರಾದೃಷ್ಟವಶಾತ್ ಸಿಡಿಲು ಬಡಿದು ಈ ಮೂವರು ಸಾವನ್ನಪ್ಪಿದ್ದಾರೆ. ಅವರೊಂದಿಗಿದ್ದ ಪರಶುರಾಮ(22), ಪ್ರವೀಣ (30), ಲಕ್ಷ್ಮಣ್ಣ(30) ದುರಗಪ್ಪ(35) ಎಂಬುವವರು ತಿವೃ ಗಾಯಗೊಂಡಿದ್ದು, ಗಾಯಳುಗಳನ್ನು ಗದಗ ಜಿಮ್ಸ್ ಗೆ ದಾಖಲಿಸಿಲಾಗಿದೆ.

ಈ ಘಟನೆ ತಿಳಿದ ತಕ್ಷಣ ಶಾಸಕ ರಾಮಣ್ಣ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ನಂತರ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ತಹಶೀಲ್ದಾರ ಅಧಿಕಾರಿಗೆ ಸೂಚಿಸಿದರು.

1 comment
  1. ಪ್ರತಿಕ್ಷಣದ ಸುದ್ದಿ ತಕ್ಷಣ. ನಿಖರ ಸುದ್ದಿಗೆ ಇನ್ನೊಂದು ಹೆಸರೇ ಉತ್ತರ ಪ್ರಭ.

Leave a Reply

Your email address will not be published. Required fields are marked *

You May Also Like

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.

ಗದಗ ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 116…

ನ. 23ರ ವರೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ!

ಧಾರವಾಡ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಬಿ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ. 23ರ ವರೆಗೂ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.