ಶಿರಹಟ್ಟಿ: ತಾಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ.
ಘಟನೆಯ ವಿವರ: ಕಡಕೋಳ ಗ್ರಾಮದ ನಿವಾಸಿಗಳಾದ ಕುಮಾರ(24), ಶರಣಪ್ಪ (38) ಮಾರುತಿ(50) ಹೊಲ ನೋಡಿ ಬರಲು ಹೋಗಿದ್ದು, ಮಳೆ, ಗಾಳಿ ಪ್ರಾರಂಭವಾಗಿದ್ದರಿಂದ ಅಲ್ಲಿಯೇ ಗಿಡದ ಮರೆಯಲ್ಲಿ ನಿಂತುಕೊಂಡಿದ್ದಾರೆ. ದುರಾದೃಷ್ಟವಶಾತ್ ಸಿಡಿಲು ಬಡಿದು ಈ ಮೂವರು ಸಾವನ್ನಪ್ಪಿದ್ದಾರೆ. ಅವರೊಂದಿಗಿದ್ದ ಪರಶುರಾಮ(22), ಪ್ರವೀಣ (30), ಲಕ್ಷ್ಮಣ್ಣ(30) ದುರಗಪ್ಪ(35) ಎಂಬುವವರು ತಿವೃ ಗಾಯಗೊಂಡಿದ್ದು, ಗಾಯಳುಗಳನ್ನು ಗದಗ ಜಿಮ್ಸ್ ಗೆ ದಾಖಲಿಸಿಲಾಗಿದೆ.

ಈ ಘಟನೆ ತಿಳಿದ ತಕ್ಷಣ ಶಾಸಕ ರಾಮಣ್ಣ ಲಮಾಣಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ನಂತರ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ತಹಶೀಲ್ದಾರ ಅಧಿಕಾರಿಗೆ ಸೂಚಿಸಿದರು.

1 comment
  1. ಪ್ರತಿಕ್ಷಣದ ಸುದ್ದಿ ತಕ್ಷಣ. ನಿಖರ ಸುದ್ದಿಗೆ ಇನ್ನೊಂದು ಹೆಸರೇ ಉತ್ತರ ಪ್ರಭ.

Leave a Reply

Your email address will not be published. Required fields are marked *

You May Also Like

ಹಿಂದೂ ಅಂತ ಭಾರತೀಯ ಭಾಷೆಯಲ್ಲಿ ಇಲ್ಲ: ಸಾಹಿತಿ ಸೂಳಿಭಾವಿ

ಉತ್ತರಪ್ರಭ ಸುದ್ದಿಗದಗ: ಹಿಂದು ಪದ ಭಾರತೀಯದ್ದಲ್ಲ ಅದು ಪರ್ಷಿಯನ್ ನಿಂದ ಬಂದಿದೆ. ಪರ್ಷಿಯನ್ ಹಾಗೂ ಇಸ್ಲಾಂದಲ್ಲಿ…

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ತವರು ಜಿಲ್ಲೆಯ ಆರೋಗ್ಯ ಇಲಾಖೆ ಕಾರ್ಮಿಕನಿಗೆ ನ್ಯಾಯ ವದಗಿಸುವರೆ ಸಚಿವ ಶ್ರೀರಾಮುಲು..?

ಸ್ವತಃ ತಮ್ಮ ತವರು ಜಿಲ್ಲೆಯಲ್ಲಿಯೇ ಕಾರ್ಮಿಕನೊಬ್ಬನಿಗೆ ಅದರಲ್ಲೂ ತಮ್ಮ ಇಲಾಖೆಯಲ್ಲಿಯೇ ಆದ ಅನ್ಯಾಯವನ್ನು ಆರೋಗ್ಯ ಸಚಿವ ಶ್ರೀರಾಮುಲು ಸರಿ ಪಡಿಸುತ್ತಾರಾ?

ಟ್ರಾಕ್ಟರ್ ಮತ್ತು ಕಾರು ಮುಖಾಮುಖಿ :ಟ್ರಾಕ್ಟರ್ ಪಿಸ್ ಪಿಸ್..!

ಉತ್ತರಪ್ರಭಗದಗ:ಟ್ರ್ಯಾಕ್ಟರ್ ಮತ್ತು ಕಾರ ನಡುವೆ ಮುಖಾಮುಖಿ ನಡೆದು ಟ್ರ್ಯಾಕ್ಟರ್ ತುಂಡಾದ ಘಟನೆ ಗದಗ ಸಮೀಪದ ಚಿಕ್ಕಟ್ಟಿ…