ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಹುಬ್ಬಳ್ಳಿ: ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿ, ವಿತ್ ಆಕ್ಸಿಜನ್ 2000 ಬೆಡ್ ಸಿದ್ಧಪಡಿಸಲಾಗುತ್ತಿದೆ. ಕಿಮ್ಸ್ ನಲ್ಲಿರು 500 ಬೆಡ್ ಬದಲಿಗೆ ಸಾವಿರ ಬೆಡ್ ಹೆಚ್ಚಳಕ್ಕೆ ನಿರ್ಧಾರಿಸಲಾಗಿದೆ. ಕಳೆದ ಬಾರಿ ಖಾಸಗಿ ಆಸ್ಪತ್ರೆಗಳು ತೋರಿದ ಅಸಹಕಾರ ಈ ಬಾರಿ ಇಲ್ಲ. ಎಲ್ಲರೂ ಸಹಕಾರ ನೀಡುತ್ತಿದ್ದಾರೆ ಎಂದರು.

ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲದಂತೆ ನೋಡಿಕೊಳ್ಳುತ್ತೇವೆ. ಹುಬ್ಬಳ್ಳಿ-ಧಾರವಾಡದಲ್ಲಿ ವೆಂಟಿಲೇಟರ್ ಕೊರೆತಯಿಲ್ಲ. ಖಾಸಗಿ ಆಸ್ಪತ್ರೆಗಳು‌ ಅಸಹಕಾರ ತೋರಿದರೆ ಅನಿವಾರ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Exit mobile version