ಗದಗ: ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ‌ ಮುಂದುವರೆದಿದೆ. ಆದರೆ, ಜನರು ಅವಶ್ಯಕ‌ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.

ಭಾನುವಾರ ಬೆಳಿಗ್ಗೆ ಗದಗ ನಗರದ ಗ್ರೀನ್ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿತ್ತು. ಆದರೆ ಗುಂಪು ಗುಂಪಾಗಿ ಜನ ವ್ಯಾಪಾರ ವಹಿವಾಟು ನಡೆಸುವ ಮೂಲಕ ಬಹುತೆಡಕರು ಸಾಮಾಜಿಕ‌ ಅಂತರ, ಮಾಸ್ಕ, ಸ್ಯಾನಿಟೈಸರನ್ನು ಮರೆತಂತೆ ಕಂಡುಬಂದಿತು. ಹೀಗಾಗಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ತರಕಾರಿ ಮಾರುಕಟ್ಟೆಯನ್ನು ಬಂದ್ ಮಾಡಿಸಿದರು. ಎಷ್ಟೆ ತಿಳಿಹೇಳಿದರು ವ್ಯಾಪಾರಸ್ಥರು ಹಾಗು ಸಾರ್ವಜನಿಕರು ಪೊಲೀಸರ ಮಾತು ಕೇಳದ ಕಾರಣ ಅನಿವಾರ್ಯವಾಗಿ ಲಾಠಿ‌ ಏಟು ನೀಡಿ ವ್ಯಾಪಾರ ವಹಿವಾಟು ಬಂದ್ ಮಾಡಿಸಬೇಕಾಯಿತು.ಉ ಶನಿವಾರವೂ ಬೆಳಿಗ್ಗೆ ಹತ್ತು ಗಂಟೆವೆರೆಗೂ ಅವಶ್ಯಕ‌ ಸಾಮಗ್ರಿಗಳ ಖರಿದಿಗೆ ಅವಕಾಶ ನೀಡಲಾಗಿತ್ತು. ತಮ್ಮ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಮುಂಜಾಗೃತ ಕ್ರಮಗಳನ್ನು ಅನುಸರಿಸದೇ ಇರುವುದು ಅಧಿಕಾರಿಗಳಲ್ಲಿ ಬೇಸರ‌ ಮೂಡಿಸಿದೆ. ಇನ್ನು ಮತ್ತೊಂದೆಡೆ ವ್ಯಾಪಾರ, ವಹಿವಾಟು ಹಾಗು ದಿನಸಿ ಖರೀದಿಗೆ ಕೊಟ್ಟ ಸಮಯಕ್ಕೂ ಮೊದಲೇ ಬಂದ್ ಮಾಡಿಸಿದರೆ ನಮ್ಮ ಉಪಜೀವನ ಹೇಗೆ? ಇನ್ನು ವ್ಯಾಪಾರದಿಂದಲೇ ಜೀವನ ನಿರ್ವಹಣೆ ಮಾಡುವ ನಮ್ಮ ಬದುಕು ಹೇಗೆ? ಎನ್ನುವ ಅಸಮಾಧಾನ ವ್ಯಾಪಾರಿಗಳು ಹಾಗು ಸಾರ್ವಜನಿಕರಿಂದ ಕೇಳಿ ಬಂದಿತು.

Leave a Reply

Your email address will not be published. Required fields are marked *

You May Also Like

ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ…

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ!

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಕುರಿತು ಆರೋಗ್ಯ…

ಹೊಸಳ್ಳಿ ಬೂದೀಶ್ವರ ಜಾತ್ರೆ ರದ್ದು

ಮುಳಗುಂದ: ಜೂನ್ 8 ಮತ್ತು 9 ರಂದು ನಡೆಯಬೇಕಿದ್ದ ಗದಗ ತಾಲೂಕಿನ ಹೊಸಳ್ಳಿ ಬೂದೀಶ್ವರ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನ ಕೋವಿಡ್-19 ಕಾರಣ ಸರ್ಕಾರದ ಸೂಚನೆಯಂತೆ ರದ್ದುಪಡಿಸಲಾಗಿದೆ. ಭಕ್ತರು ಅಂದು ಮನೆಯಲ್ಲಿಯೇ ಪೂಜಾ ಕೈಂಕರ್ಯ ಮಾಡಿಕೋಳ್ಳಬೇಕು ಎಂದು ಶ್ರೀಮಠದ ಅಭಿನವ ಬೂದೀಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೀನು ಸಾರು ಮಾಡಿವಿ ಬಾ ಅಪ್ಪಾ, ಎನ್ನುವ ಕರುಳಿನ ಕೂಗಿಗೂ ಬಾರದೇ ಹೋದ ಅಪ್ಪ..!

ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಅಪ್ಪನನ್ನು ಕಂಡ ಮಕ್ಕಳು ಅಪ್ಪ, ಕೈಯಲ್ಲಿ ಹಿಡಿದುಕೊಂಡು ಬಂದ ಚೀಲವನ್ನೆ ಕಣ್ಣರಳಿಸಿ ನೋಡಿದ್ದಾರೆ. ಅಪ್ಪ ತಂದ ಮೀನು ಕಂಡು ಹಿರಿಹಿರಿ ಹಿಗ್ಗಿದ್ದಾರೆ. ಮಕ್ಳಾ ಮೀನು ಸಾರು ರೆಡಿ ಆಗ್ಲಿ ನಾನು ಸ್ವಲ್ಪ ಹೊರಗ್ ಹೋಗಿ ಬರ್ತಿನಿ ಅಂತ ಹೊರ ನಡೆದ ಅಪ್ಪ.