ಗದಗ: ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ‌ ಮುಂದುವರೆದಿದೆ. ಆದರೆ, ಜನರು ಅವಶ್ಯಕ‌ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.

ಭಾನುವಾರ ಬೆಳಿಗ್ಗೆ ಗದಗ ನಗರದ ಗ್ರೀನ್ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿತ್ತು. ಆದರೆ ಗುಂಪು ಗುಂಪಾಗಿ ಜನ ವ್ಯಾಪಾರ ವಹಿವಾಟು ನಡೆಸುವ ಮೂಲಕ ಬಹುತೆಡಕರು ಸಾಮಾಜಿಕ‌ ಅಂತರ, ಮಾಸ್ಕ, ಸ್ಯಾನಿಟೈಸರನ್ನು ಮರೆತಂತೆ ಕಂಡುಬಂದಿತು. ಹೀಗಾಗಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ತರಕಾರಿ ಮಾರುಕಟ್ಟೆಯನ್ನು ಬಂದ್ ಮಾಡಿಸಿದರು. ಎಷ್ಟೆ ತಿಳಿಹೇಳಿದರು ವ್ಯಾಪಾರಸ್ಥರು ಹಾಗು ಸಾರ್ವಜನಿಕರು ಪೊಲೀಸರ ಮಾತು ಕೇಳದ ಕಾರಣ ಅನಿವಾರ್ಯವಾಗಿ ಲಾಠಿ‌ ಏಟು ನೀಡಿ ವ್ಯಾಪಾರ ವಹಿವಾಟು ಬಂದ್ ಮಾಡಿಸಬೇಕಾಯಿತು.ಉ ಶನಿವಾರವೂ ಬೆಳಿಗ್ಗೆ ಹತ್ತು ಗಂಟೆವೆರೆಗೂ ಅವಶ್ಯಕ‌ ಸಾಮಗ್ರಿಗಳ ಖರಿದಿಗೆ ಅವಕಾಶ ನೀಡಲಾಗಿತ್ತು. ತಮ್ಮ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಮುಂಜಾಗೃತ ಕ್ರಮಗಳನ್ನು ಅನುಸರಿಸದೇ ಇರುವುದು ಅಧಿಕಾರಿಗಳಲ್ಲಿ ಬೇಸರ‌ ಮೂಡಿಸಿದೆ. ಇನ್ನು ಮತ್ತೊಂದೆಡೆ ವ್ಯಾಪಾರ, ವಹಿವಾಟು ಹಾಗು ದಿನಸಿ ಖರೀದಿಗೆ ಕೊಟ್ಟ ಸಮಯಕ್ಕೂ ಮೊದಲೇ ಬಂದ್ ಮಾಡಿಸಿದರೆ ನಮ್ಮ ಉಪಜೀವನ ಹೇಗೆ? ಇನ್ನು ವ್ಯಾಪಾರದಿಂದಲೇ ಜೀವನ ನಿರ್ವಹಣೆ ಮಾಡುವ ನಮ್ಮ ಬದುಕು ಹೇಗೆ? ಎನ್ನುವ ಅಸಮಾಧಾನ ವ್ಯಾಪಾರಿಗಳು ಹಾಗು ಸಾರ್ವಜನಿಕರಿಂದ ಕೇಳಿ ಬಂದಿತು.

Leave a Reply

Your email address will not be published. Required fields are marked *

You May Also Like

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

ಡ್ರಗ್ಸ್ ವಿಚಾರ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ

ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…