ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಸತತ ಮಳೆಯಾಗುತ್ತಿದೆ. ಇನ್ನು ಐದು ದಿನಗಳ ಕಾಲ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ. ಇನ್ನು ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಮಳೆ ಸಂಭವಿಸುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 16.97 ಮಿ.ಮೀ ಮಳೆ ದಾಖಲಾಗಿದೆ.

ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮಿಂಚಿನೊಂದಿಗೆ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನರ‍್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ರ‍್ನಾಟಕ ನೈರ‍್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ರ‍್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 109.5 ಮಿ.ಮೀ ಬೆಂಗಳೂರು ಪಶ್ಚಿಮ ವಲಯದಲ್ಲಿ ದಾಖಲಾಗಿದೆ.

ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಅಧಿಕವಾಗಿದ್ದ ತಾಪಮಾನ ಕಳೆದ ವಾರ ಸ್ವಲ್ಪ ತಗ್ಗಿದೆ.

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆಯ ಕಿರುಕುಳಕ್ಕೆ ಮನನೊಂದು ಶಿಂಗಟರಾಯನಕೆರೆ ತಾಂಡಾದ ಮಹಿಳೆ ಸಾವು

ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ…

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

ಕೊರೊನಾದಿಂದಾಗಿ ಮಲೆ ಮಹದೇಶ್ವರನಿಗೆ ಎಷ್ಟು ನಷ್ಟವಾಗಿದೆ ಗೊತ್ತಾ?

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.

ಲಕ್ಷ್ಮೇಶ್ವರ: ಗೋಡೆ ಕುಸಿತ, ತಪ್ಪಿದ ಅನಾಹುತ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೆರೆ ಓಣಿಯಲ್ಲಿ ಮನೆಗಳ ಗೋಡೆ ಕುಸಿದಿವೆ. ಲಕ್ಷ್ಮೇಶ್ವರ: ಬೆಂಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.