ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಬಸ್‌ ಸಂಚಾರ ಇರೋದಿಲ್ಲ. 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುತ್ತದೆ. ಕಟ್ಟಡ ಕಾಮಗಾರಿಗಳಿಗೆ, ಗಾರ್ಮೆಂಟ್‌ ವಲಯಗಳನ್ನು ಹೊರತು ಪಡಿಸಿ ಉತ್ಪಾದನ ವಲದಯದ ಕಾರ್ಖಾನೆಗಳ ಕೆಲಸಕ್ಕೆ ಅವಕಾಶ ನೀಡಲಾಗಿದೆ. ಇನ್ನೂ ಅವಶ್ಯಕವಾಗಿರುವ ಸೇವೆಗಳನ್ನು ಹೊರತು ಪಡಿಸಿ ಎಲ್ಲವನ್ನು ಬಂದ್‌ ಮಾಡಲು ಅವಕಾಶ ನೀಡಲಾಗಿದೆ ಬೆಳಗ್ಗೆ 6ರಿಂದ 10ರ ತನಕ ಅವಕಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಅಂತ ಅಂತ ಹೇಳಿದರು.

ಈಗ ಹೇರಿರುವ 15 ದಿನಗಳ ಲಾಕ್ ಡೌನ್ ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ಕ್ರಮಗಳನ್ನು ನೋಡಿಕೊಂಡು ಕ್ರಮಗಳನ್ನು ಕೈಗೊಳ್ಳಲಾಗುವುದು. ಒಂದು ವೇಳೆ ಈ ಸಮಯದಲ್ಲಿ ಪರಿಸ್ಥಿತಿ ಸುಧಾರಿಸದೇ ಹೋದ್ರೆ ಮತ್ತೆ ಒಂದು ವಾರ ಲಾಕ್‌ಡೌನ್ ಮಾಡಲಾಗುವುದು ಎಂದರು.

ಏನು ಇರುತ್ತದೆ?

ಮೆಡಿಕಲ್‌ ಶಾಪ್‌, ಬ್ಯಾಂಕ್‌, ಎಟಿಎಂ ಸೇವೆ, ರಕ್ತನಿಧಿ ಕೇಂದ್ರ, ಆಸ್ಪತ್ರೆ – ಕ್ಲಿನಿಕ್‌ಗಳು, ಬಾರ್‌, ದಿನಸಿ ಅಂಗಡಿ  (ನಿಗದಿತ ಸಮಯದಲ್ಲಿ ತೆರೆಯಲು ಅವಕಾಶ, ಬೆಳಗ್ಗೆ ಆರರಿಂದ ಹತ್ತರ ತನಕ ಅವಕಾಶ) ಅವಕಾಶವಿರುತ್ತದೆ.

ಏನು ಇರೋಲ್ಲ?

ಬಾರ್‌, ಶಾಲಾ-ಕಾಲೇಜು, ಅಂತರ್‌ ಜಿಲ್ಲೆ, ರಾಜ್ಯ ಓಡಾಟ,  ಬಸ್‌ ಸಂಚಾರ (ಕೆಎಸ್‌ಆರ್‌ಟಿಸಿ,ಬಿಎಂಟಿಸಿ, ಮೆಟ್ರೋ ಸಂಚಾರ) ಗೂಡ್ಸ್‌, ಖಾಸಗಿ ವಾಹನಗಳ ಓಡಾಡಕ್ಕೆ ಬಂದ್‌. ಆದ್ರೆ ಅಂತರ್‌ ಜಿಲ್ಲೆಗಳ ಗೂಡ್ಸ್‌ ವಾಹನಗಳ ಓಡಾಡಕ್ಕೆ ಮಾತ್ರ ಅವಕಾಶವಿದೆ.

Leave a Reply

Your email address will not be published. Required fields are marked *

You May Also Like

ಪ್ರೇರಣಾದಾಯಕ ನಡಿಗೆ ಸ್ಪೂತಿ೯ಯಡೆಗೆ…!!!

ಹೀಗೊಂದು ಆಯಾಸಯಿಲ್ಲದ ಹೆಜ್ಜೆ ಗುರುತು ಸಂಚಲನ… ಉತ್ತರಪ್ರಭ ಆಲಮಟ್ಟಿ: ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ…

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು!

ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಅಲ್ಲಿ ಮತ್ತೆ ನೆತ್ತರು ಹರಿದಿದೆ.

ಗದಗ ಹೆರಿಗೆ ಆಸ್ಪತ್ರೆಗೆ ಕೊರೊನಾ ಭಯ..!:ಗರ್ಭಿಣಿಗೆ ಸೋಕಿನ ಶಂಕೆ!

ಗದಗ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಗದಗ ಜಿಲ್ಲೆ ಜನರನ್ನು ಆತಂಕಕ್ಕೀಡು ಮಾಡಿದೆ.…

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ಕು ಜನರ ಸಾಮೂಹಿಕ ಅಂತ್ಯಸಂಸ್ಕಾರ ಸಂಸ್ಕಾರ ಮಾಡಿದ ಬಿನ್ನಾಳ ಗ್ರಾಮಸ್ಥರು

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರದ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಒಂದೇ…