ಬೆಂಗಳೂರು: ಕೋವಿಡ್ ಮಹಾಮಾರಿಗೆ ಸ್ಯಾಂಡಲ್ ವುಡ್ ನಿರ್ದೇಶಕ ಕೋಟಿ ರಾಮು ನಿಧನರಾಗಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ತಮ್ಮದೇ ಆದ ಛಾಪು ಹೊಂದಿದ್ದ ರಾಮು ಅವರು, ಸಿಂಹದ ಮರಿ, ಚಾಮುಂಡಿ, ಕಲಾಸಿಪಾಳ್ಯ, ಆಟೋಶಂಕರ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿದ್ದರು.
ಕಳೆದ ಒಂದು ವಾರ ಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ರಾಮು ಅವರು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯ ಅನೇಕ ಗಣ್ಯರು ರಾಮು ಅವರ ನಿಧನಕ್ಕೆ ಕಂಬನಿ ಮಿಡಿದಿದೆ.