ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಕರ್ಫ್ಯೂ ಜಾರಿಯಾಗಿದ್ದರಿಂದ ಸರಳವಾಗಿ ವಿವಾಹ ಮಾಡಿಕೊಳ್ಳಲು ತೆರಳುತ್ತಿದ್ದ ವರನನ್ನು ತಡೆದ ಪೊಲೀಸರು, ಮದುವೆ ಆಗುತ್ತಿರುವುದು ಖಚಿತ ಪಡಿಸಿಕೊಂಡ ಬಳಿಕ ಶುಭಕೋರಿ ಕಳುಹಿಸಿರುವ ಘಟನೆ ನಡೆದಿದೆ.

ವಿವಾಹ ಸಮಾರಂಭಕ್ಕೆ ಸರ್ಕಾರ ಜನರನ್ನು ನಿಗದಿಪಡಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಆಡಂಬರ ಇಲ್ಲದೆ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವರನನ್ನು ಅಡ್ಡಿಪಡಿಸಿದ ಮಾಗಡಿ ರಸ್ತೆಯ ಪೊಲೀಸರು, ಕರ್ಫ್ಯೂ ನಡುವೆ ಅನಗತ್ಯವಾಗಿ ಸಂಚಾರ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಧುಮಗ, ಇಂದು ನನ್ನ ವಿವಾಹ, ದೇವಸ್ಥಾನದಲ್ಲಿ ಮದುವೆ ಆಗುತ್ತಿದ್ದೇನೆ. ನಮ್ಮ ತಂದೆಯವರೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದೇನೆ ವಿವರಿಸಿದರು.

ಇದನ್ನು ಒಪ್ಪದ ಪೊಲೀಸರು ದಂಡ ವಿಧಿಸಲು ಮುಂದಾದರು. ಮೂಹೂರ್ತಕ್ಕೆ ಸಮಯ ಮೀರುತ್ತಿದೆ ಎಂದರೂ ಪೊಲೀಸರು ಕನಿಕರ ತೋರಲಿಲ್ಲ. ಬಳಿಕ ಮಧುಮಗನ ಸಂಬಂಧಿಕರು ವಿವಾಹದ ಅಹ್ವಾನ ಪತ್ರಿಕೆಯನ್ನು ತಂದು ಪೊಲೀಸರಿಗೆ ತೋರಿಸಿದರು. ವರನ ಹೆಸರನ್ನು ಖಚಿತಪಡಿಸಿಕೊಂಡ ಪೊಲೀಸರು ಶುಭಕೋರಿ ಕಳುಹಿಸಿದರು ಎಂದು ವರನ ಸಂಬಂಧಿಕರು ಮಾಧ್ಯಮಗಳಿಗೆ ವಿವರಿಸಿದರು.

Leave a Reply

Your email address will not be published. Required fields are marked *

You May Also Like

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…

ಕಾಲೇಜು ಪ್ರಾರಂಭಕ್ಕೆ ಕೂಡಿ ಬಂದ ಮುಹೂರ್ತ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳು ತೆರೆಯುವ ಮುನ್ಸೂಚನೆ ಇನ್ನೂ ಸಿಗುತ್ತಿಲ್ಲ. ಆದರೆ, ನವೆಂಬರ್ ನಲ್ಲಿ ತೆರೆಯುವ ಚಿಂತನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಸಕ್ಕರೆ ನಾಡಿನಲ್ಲಿ ಸಿಹಿಯಾದ ಮಾತಿಗೆ ಮರುಳಾಗಿ 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡ ನಾರಿಯರು!!

ಬೆಂಗಳೂರು : ಸಕ್ಕರೆ ನಾಡಿನಲ್ಲಿ ಸಿಹಿಯಾದ ಆಮಿಷಕ್ಕೆ ಮಹಿಳೆಯರು ಬಲಿಯಾಗಿ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡಿರುವ ಘಟನೆ ನಡೆದಿದೆ.

ದೇವಿ ಪುರಾಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ

ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.