ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಕರ್ಫ್ಯೂ ಜಾರಿಯಾಗಿದ್ದರಿಂದ ಸರಳವಾಗಿ ವಿವಾಹ ಮಾಡಿಕೊಳ್ಳಲು ತೆರಳುತ್ತಿದ್ದ ವರನನ್ನು ತಡೆದ ಪೊಲೀಸರು, ಮದುವೆ ಆಗುತ್ತಿರುವುದು ಖಚಿತ ಪಡಿಸಿಕೊಂಡ ಬಳಿಕ ಶುಭಕೋರಿ ಕಳುಹಿಸಿರುವ ಘಟನೆ ನಡೆದಿದೆ.

ವಿವಾಹ ಸಮಾರಂಭಕ್ಕೆ ಸರ್ಕಾರ ಜನರನ್ನು ನಿಗದಿಪಡಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಆಡಂಬರ ಇಲ್ಲದೆ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವರನನ್ನು ಅಡ್ಡಿಪಡಿಸಿದ ಮಾಗಡಿ ರಸ್ತೆಯ ಪೊಲೀಸರು, ಕರ್ಫ್ಯೂ ನಡುವೆ ಅನಗತ್ಯವಾಗಿ ಸಂಚಾರ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಧುಮಗ, ಇಂದು ನನ್ನ ವಿವಾಹ, ದೇವಸ್ಥಾನದಲ್ಲಿ ಮದುವೆ ಆಗುತ್ತಿದ್ದೇನೆ. ನಮ್ಮ ತಂದೆಯವರೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದೇನೆ ವಿವರಿಸಿದರು.

ಇದನ್ನು ಒಪ್ಪದ ಪೊಲೀಸರು ದಂಡ ವಿಧಿಸಲು ಮುಂದಾದರು. ಮೂಹೂರ್ತಕ್ಕೆ ಸಮಯ ಮೀರುತ್ತಿದೆ ಎಂದರೂ ಪೊಲೀಸರು ಕನಿಕರ ತೋರಲಿಲ್ಲ. ಬಳಿಕ ಮಧುಮಗನ ಸಂಬಂಧಿಕರು ವಿವಾಹದ ಅಹ್ವಾನ ಪತ್ರಿಕೆಯನ್ನು ತಂದು ಪೊಲೀಸರಿಗೆ ತೋರಿಸಿದರು. ವರನ ಹೆಸರನ್ನು ಖಚಿತಪಡಿಸಿಕೊಂಡ ಪೊಲೀಸರು ಶುಭಕೋರಿ ಕಳುಹಿಸಿದರು ಎಂದು ವರನ ಸಂಬಂಧಿಕರು ಮಾಧ್ಯಮಗಳಿಗೆ ವಿವರಿಸಿದರು.

Leave a Reply

Your email address will not be published. Required fields are marked *

You May Also Like

ಅಪರೂಪದ ಕರಿನಾಗರ ಪ್ರತ್ಯಕ್ಷ, ಕುತೂಹಲ ಮೂಡಿಸೊದ ಕಪ್ಪು ಬಣ್ಣದ ಉರಗ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ನರಗುಂದ ತಾಲೂಕಿನ ಹೊರವಲಯದಲ್ಲಿರುವ ಜ್ಞಾನಮುದ್ರಾ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಅಪರೂಪದ…

5 ರಂದು ನಡೆಯುವ ಯುವಜನ ಸಂಕಲ್ಪ ನಡಿಗೆ ಯಾತ್ರೆ ಯಶಸ್ವಿಗೆ ಮನವಿ

ಆಲಮಟ್ಟಿ: 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂಗವಾಗಿ ಸದೃಢ, ಸಶಕ್ತ ಭಾರತಕ್ಕಾಗಿ ಅಗಷ್ಟ 5 ರಂದು…

ಲಕ್ಷ್ಮೇಶ್ವರದಲ್ಲಿ ಆಹಾರ ಕಿಟ್ ವಿತರಿಸಿದ ಶಾಸಕ ಲಮಾಣಿ

ಲಕ್ಷ್ಮೇಶ್ವರ: ಶಾಸಕ ರಾಮಣ್ಣ ಲಮಾಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರು ಬೇಗ ಗುಣಮುಖರಾಗಲೆಂದು ಪೌಷ್ಟಿಕ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಣೆ ಮಾಡಿದರು.