ಗಜೇಂದ್ರಗಡ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ತೀವೃತೆ ಪಡೆದುಕೊಳ್ಳುತ್ತಿದೆ. ಇದನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಅದರನ್ವಯ ಪಟ್ಟಣದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಲಾಗಿದೆ.
ಏ. 27 ರಂದು ನಡೆಯಬೇಕಿದ್ದ ಮಂಗಳವಾರದ ವಾರದ ಸಂತೆಯನ್ನು ರದ್ದು ಮಾಡಿದ್ದು, ಎಂದುನಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಬೇಕು. ಬೇರೆ ಪ್ರದೇಶಗಳಿಂದ ಪಟ್ಟಣಕ್ಕೆ ಬಂದು ವ್ಯಾಪಾರ ವಹಿವಟನ್ನು ನಿಷೇಧಿಸಲಾದೆ ಎಂದು ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.