ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾಣಗಳು ಕೈಗೊಳ್ಳಲಿದೆ. ರಾಜ್ಯದ ಲಾಕ್ ಡೌನ್ ಭವಿಷ್ಯ, ಲಸಿಕೆಗೆ ಶುಲ್ಕ ನಿಗದಿ ತರ‍್ಮಾನದ ಜೊತೆಗೆ ಶಿಕ್ಷಕರ ವರ್ಗಾವಣೆ ಸಮಸ್ಯೆಗೆ ಪರಿಹಾರ ಏನೆಂಬ ಪ್ರಶ್ನೆಗೆ ಇಂದು ಸಭೆಯಲ್ಲಿ ಉತ್ತತರ ಸಿಗುವ ಸಾಧ್ಯತೆ ಇದೆ.

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ 2 ವಾರ ನಗರವನ್ನು ಲಾಕ್ ಡೌನ್ ಮಾಡುವುದು ಅನಿವಾರ‍್ಯ ಇದೆ ಎಂದು ತಜ್ಞರು ಸಲಹೆ ನೀಡಿರುವುದರಿಂದ ಇಂದಿನ ಸಭೆ ಮೇಲೆ ರಾಜ್ಯದ ಜನರ ದೃಷ್ಟಿ ನೆಟ್ಟಿದೆ. ರಾಜ್ಯಾದ್ಯಂತ ಮುಂದಿನ 15 ದಿನ ಲಾಕ್ ಡೌನ್ ಮಾಡುವ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. ವಾರಾಂತ್ಯದ ಕರ್ಫ್ಯೂ ಅಥವಾ ಲಾಕ್ ಡೌನ್ ಮಾಡುವ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಸಹೋದ್ಯೋಗಿಗಳ ಜೊತೆ ಚರ್ಚಿಸಿದ್ದಾರೆ. ಬಹುತೇಕ ಸಚಿವರು ವಾರಂತ್ಯದ ಕರ್ಫ್ಯೂ ಮುಂದುವರಿಸಲು ಒಲವು ತೋರಿದ್ದಾರೆ. ಆದರೆ, ತಜ್ಞರು ಲಾಕ್ ಡೌನ್ ಗೆ ಸಲಹೆ ನೀಡಿದರೆ ಅದನ್ನು ಒಪ್ಪುವುದು ಸೂಕ್ತ ಎಂದು ಕೆಲವರು ಹೇಳಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ದಲಿತ ವಿಮೋಚನಾ ಸೇನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪೂಜಾ

ನಿಡಗುಂದಿ; ದಲಿತ ವಿಮೋಚನಾ ಸೇನೆಯ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆಯಾಗಿ ಪಟ್ಟಣದ ಪೂಜಾ ಪೀರಪ್ಪ ದೊಡಮನಿ…

ಗದಗ ಜಿಲ್ಲೆಯಲ್ಲಿಂದು 71 ಕೊರೊನಾ ಪಾಸಿಟಿವ್: ತಾಲೂಕುವಾರು ವಿವರ

ಅಕ್ಟೋಬರ್ 02 ರವರೆಗಿನ ಗದಗ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ರಾಮಣ್ಣ

ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಿಗೆ ಸುಗಮ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ನೀಡುವುದರ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಆಲಮಟ್ಟಿ ರಮ್ಯ ನೋಟಕ್ಕೆ ರಾಜ್ಯಪಾಲರು ಫಿದಾ..!

ಉತ್ತರಪ್ರಭಆಲಮಟ್ಟಿ: (ವಿಜಯಪುರ ಜಿಲ್ಲೆ) ಮೊಟ್ಟಮೊದಲ ಬಾರಿಗೆ ಬಯಲುನಾಡಿನ ಪ್ರಾಕೃತಿಕ ತಾಣದಲ್ಲಿ ರಾಜ್ಯದ ರಾಜ್ಯಪಾಲರ ದಿವ್ಯ ದರ್ಶನ…