ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.
ದೆಹಲಿಗೆ ಆಮ್ಲಜನಕ ಒದಗಿಸಲು ಕೇರಳವು ಸಿದ್ಧವಿದ್ದರೂ, ಅದನ್ನು ದೆಹಲಿಗೆ ಸಾಗಿಸುವುದು ನಮ್ಮ ಮುಂದಿರುವ ಸವಾಲಾಗಿದೆ. ಆಮ್ಲಜನಕ ಸಾಗಣೆ ಕುರಿತು ದೆಹಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ದೇವ್ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಮುಖ್ಯ ಕಾರ್ಯದರ್ಶಿ ವಿಪಿ ಜಾಯ್ ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಂದ ಪತ್ರ ಸ್ವೀಕರಿಸಿದ ನಂತರ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದೆಹಲಿಗೆ ಆಮ್ಲಜನಕ ಒದಗಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳಿಗೆ ಸೂಚಿಸಿದರು.