ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.

ದೆಹಲಿಗೆ ಆಮ್ಲಜನಕ ಒದಗಿಸಲು ಕೇರಳವು ಸಿದ್ಧವಿದ್ದರೂ, ಅದನ್ನು ದೆಹಲಿಗೆ ಸಾಗಿಸುವುದು ನಮ್ಮ ಮುಂದಿರುವ ಸವಾಲಾಗಿದೆ. ಆಮ್ಲಜನಕ ಸಾಗಣೆ ಕುರಿತು ದೆಹಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ದೇವ್ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಮುಖ್ಯ ಕಾರ್ಯದರ್ಶಿ ವಿಪಿ ಜಾಯ್ ಹೇಳಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಂದ ಪತ್ರ ಸ್ವೀಕರಿಸಿದ ನಂತರ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದೆಹಲಿಗೆ ಆಮ್ಲಜನಕ ಒದಗಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *

You May Also Like

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಇಂದು ಕೂಡ ನಾಲ್ಕು ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಇಂದು 4,439 ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ, ಇಂದು ಆಸ್ಪತ್ರೆಯಿಂದ 10,106 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 32 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ

ಇಂದು ರಾಜ್ಯಾದ್ಯಂತ ವಿಧಾನಸಭಾ ಚುನಾವಣೆಗೆ ಮತದಾನ ಶರುವಾಗಿದ್ದು ಗದಗ ಜಿಲ್ವಿಲೆಯಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇಕಡಾವಾರು…

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…