ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.

ದೆಹಲಿಗೆ ಆಮ್ಲಜನಕ ಒದಗಿಸಲು ಕೇರಳವು ಸಿದ್ಧವಿದ್ದರೂ, ಅದನ್ನು ದೆಹಲಿಗೆ ಸಾಗಿಸುವುದು ನಮ್ಮ ಮುಂದಿರುವ ಸವಾಲಾಗಿದೆ. ಆಮ್ಲಜನಕ ಸಾಗಣೆ ಕುರಿತು ದೆಹಲಿ ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ದೇವ್ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದು ಮುಖ್ಯ ಕಾರ್ಯದರ್ಶಿ ವಿಪಿ ಜಾಯ್ ಹೇಳಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಂದ ಪತ್ರ ಸ್ವೀಕರಿಸಿದ ನಂತರ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದೆಹಲಿಗೆ ಆಮ್ಲಜನಕ ಒದಗಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *

You May Also Like

ಹುಬ್ಬಳ್ಳಿ ಗುರುಸ್ವಾಮಿ ಬೆತ್ತಲೆ ವಿಡಿಯೋಗೆ ಸಿಕ್ಕ ಸ್ಪಷ್ಟನೆ!

ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ಸೆಟ್ಲಮೆಂಟ್ ನಿವಾಸಿಗಳ ಸಮಸ್ಯೆ ಸೆಟ್ಲ್ ಆಗೋದು ಯಾವಾಗ?

ನಗರದ ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ಆಡಳಿತ ವ್ಯವಸ್ಥೆ ಜಿಡ್ಡುಗಟ್ಟಿದರೆ ಜನ ಸಾಮಾನ್ಯರ ಸ್ಥಿತಿ ಹೇಗೆ? ಜನರಿಗೆ ನೆಮ್ಮದಿ ಒದಗಿಸಬೇಕಿದ್ದ ನಗರಸಭೆಯ ನಿರ್ಲಕ್ಷ್ಯದಿಂದ ಪೈಪ್ ಒಡೆದು ಅಪಾರ ನೀರು ಪೋಲಾಗುವ ಜೊತೆಗೆ ಸಾಂಕ್ರಾಮಿಕ ಇಲ್ಲಿನ ಬೆಟಗೇರಿ ಸೆಟ್ಲಮೆಂಟ್ ಭಾಗದ ಜನರಿಗೆ ಕಾಯಿಲೆಯ ಸಂಕಟ ಎದುರಾಗಿದೆ.

ಮೋದಿ ಸರ್ಕಾರ ಜನರಿಗೆ ಬೆಲೆ ಏರಿಕೆ ಬರೆ ನೀಡುತ್ತಿದೆ: ತಾಹೀರ್ ಹುಸೇನ್

ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದನ್ನು ತೀರ್ವವಾಗಿ ಖಂಡಿಸುತ್ತದೆ ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಹೇಳಿದರು.