ದೇಶವೇ ಕೋವಿಡ್ ನಿಂದ ಬಳಲುತ್ತಿರುವಾಗ ಪ್ರಧಾನಿ ಮೋದಿ ಬೇಜವಾಬ್ದಾರಿ ಹೇಳಿಕೆ ನಿಡುವುದು ಎಷ್ಟರ ಮಟ್ಟಿಗೆ ಸರಿ

ಬೆಂಗಳೂರು; ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿ ಬಿಟ್ಟಿತು ಎಂಬ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೊದಿ ಅವರು ಹೇಳಿತ್ತಿರುವುದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ದೇಶದ ವೈದ್ಯಕೀಯ ಸವಲತ್ತುಗಳಿಲ್ಲದೆ ಕೊರೊನಾದಿಂದಾಗಿ ವಿಶ್ವದಲ್ಲೇ ಅತೀ ಹೆಚ್ಚು ನರಳುತ್ತಿದೆ. ಇಂತಹ ಪರಸ್ಥಿತಿಯಲ್ಲಿ ಕೊರೋನಾ ವಿಪತ್ತಿನಿಂದ ದೇಶವನ್ನು ರಕ್ಷಸಿಬಿಟ್ಟಿತು ಎಂಬ ಪ್ರಧಾನಿ ಮೋದಿ ಹೇಳುವ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರು ಚಿಕಿತ್ಸೆ ಸಿಗದೇ ಸೋಂಕಿನಿಂದ ಹೆಜ್ಜೆ ಹೆಜ್ಜೆಗು ಸಾಯುತ್ತಿದ್ದಾರೆ. ಜನರ ಸಾವಲ್ಲೂ ರಾಜಕೀಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.

Exit mobile version