ಗದಗ: ಜಿಲ್ಲೆಯಲ್ಲಿ ಇಂದು 307 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ಒಟ್ಟು 22730 ಆಗಿದೆ.
ಇದುವರೆಗೆ 372520 ಜನರು ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾಗಿದ್ದಾರೆ.
ಸೋಂಕಿನ ಪರೀಕ್ಷೆಗಾಗಿ 381761ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 358843
ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾಗಿದ್ದು, 188 ಕೇಸ್ ಗಳ ವರದಿ ಬರಲು ಬಾಕಿ ಇದೆ. ಇಂದು ಐದು ಜನ ಸೇರಿ 236 ಜನರು ಈವರೆಗೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಇದರಲ್ಲಿ
ಇಂದು 405 ಜನರು ಸೇರಿ
ಒಟ್ಟು 19598 ಜನ ಗುಣಮುಖರಾಗಿದ್ದಾರೆ.
ಸದ್ಯ 2896 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಅಂಕಿ ಅಂಶ ಬಿಡುಗಡೆ ಮಾಡಿದ್ದಾರೆ.

ತಾಲೂಕುವಾರು ಸೋಂಕಿತರ ವಿವರ ಗದಗ-133, ಮುಂಡರಗಿ-40, ನರಗುಂದ-22, ರೋಣ-52, ಶಿರಹಟ್ಟಿ-49, ಹೊರಜಿಲ್ಲೆಯ ಪ್ರಕರಣಗಳು-06

ಕೋವಿಡ್-19: ಮೃತರ ವಿವರ
ಗದಗ ತಾಲ್ಲೂಕಿನ ಬೆಟಗೇರಿ ನಿವಾಸಿ 40 ವರ್ಷದ ಮಹಿಳೆ ಪಿ-2564500 ಅವರು ಜಿಮ್ಸ್ ಆಸ್ಪತ್ರೆಗೆ ಮೇ.14 ರಂದು ದಾಖಲಾಗಿದ್ದರು. ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಶ್ವಾಸಕೋಶ, ನಿಮೋನಿಯಾ ಕಾಯಿಲೆಯಿಂದ ಮೇ.23 ರಂದು ಮೃತಪಟ್ಟಿರುತ್ತಾರೆ.

ಧಾರವಾಡ ಜಿಲ್ಲೆ ಹುಬ್ಬಳ್ಳಿ ನಿವಾಸಿ 48 ವರ್ಷದ ಮಹಿಳೆ ಪಿ-2564503 ಅವರು ಜಿಮ್ಸ್ ಆಸ್ಪತ್ರೆಯಲ್ಲಿ ಮೇ.11 ರಂದು ದಾಖಲಾಗಿದ್ದರು. ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಶ್ವಾಸಕೋಶ, ನಿಮೋನಿಯ ತೊಂದರೆಯಿಂದಾಗಿ ಮೇ.23 ರಂದು ಮೃತಪಟ್ಟಿರುತ್ತಾರೆ.

ಶಿರಹಟ್ಟಿ ತಾಲ್ಲೂಕು ನಿವಾಸಿ 35 ವರ್ಷದ ಪುರುಷ ಪಿ-2564504 ಅವರು ಜಿಮ್ಸ್ ಆಸ್ಪತ್ರೆಗೆ ಮೇ.20 ರಂದು ದಾಖಲಾಗಿದ್ದರು. ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಶ್ವಾಶಕೋಶ, ನಿಮೋನಿಯಾ ತೊಂದರೆಯಿಂದಾಗಿ ಮೇ.23 ರಂದು ಮೃತಪಟ್ಟಿರುತ್ತಾರೆ.

ರೋಣ ತಾಲ್ಲೂಕಿನ ಹುಲ್ಲೂರ ನಿವಾಸಿ 72 ವರ್ಷದ ಪುರುಷ ಪಿ-2443201 ಅವರು ಜಿಮ್ಸ್ ಆಸ್ಪತ್ರೆಗೆ ಮೇ.20 ರಂದು ದಾಖಲಾಗಿದ್ದರು. ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಶ್ವಾಸಕೋಶ, ನಿಮೋನಿಯಾ ತೊಂದರೆಯಿಂದಾಗಿ ಮೇ.26 ರಂದು ಮೃತಪಟ್ಟಿರುತ್ತಾರೆ.

ದಗ ತಾಲ್ಲೂಕಿನ ಕಳಸಾಪುರ ನಿವಾಸಿ 37 ವರ್ಷದ ಪುರುಷ ಪಿ-2564506 ಅವರು ಖಾಸಗಿ ಆಸ್ಪತ್ರೆಗೆ ಮೇ.21 ರಂದು ದಾಖಲಾಗಿದ್ದರು. ಇವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ನಿಮೋನಿಯಾ ತೊಂದರೆಯಿಂದಾಗಿ ಮೇ.24 ರಂದು ಮೃತಪಟ್ಟಿರುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು ಇಳಿಕೆ ಕಂಡ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಪ್ಪತ್ತಗುಡ್ಡ ವನ್ಯಜೀವಿಧಾಮ: ಕೈಬಿಡಲು ಒತ್ತಾಯಿಸಿ ಮನವಿ

ಸರ್ಕಾರ ಅವೈಜ್ಞಾನಿಕವಾಗಿ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮ ಎಂದು ಘೋಷಿಸಿದ್ದು, ಶಿರಹಟ್ಟಿ ತಾಲೂಕಿನ‌ ಬ್ಲಾಕ್ ನಂ 3 ಮತ್ತು 4 ರ ಅರಣ್ಯ ಕ್ಷೇತ್ರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಅಹಿಂದ್ ಸಂಘ ಹಾಗೂ‌ ಕ್ರಷರ್ ಮತ್ತು‌ ಕಲ್ಲು ಗಣಿಗಾರಿಕೆ ಕಾರ್ಮಿಕ ಒಕ್ಕೂಟ ಸಂಘದ ವತಿಯಿಂದ ಬುಧವಾರ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ‌ ಮನವಿ‌ ಸಲ್ಲಿಸಲಾಯಿತು.

ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಜವಾಬ್ದಾರಿ ಮುಗಿಯಲ್ಲ

ಸರ್ಕಾರ ಅನೇಕ ಯೋಜನೆಗಳನ್ನು ಅದರಲ್ಲೂ ಮುಖ್ಯವಾಗಿ ನೀರಿಗಾಗಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಕೇವಲ ಪೈಪ್ ಹಾಕಿ ಟ್ಯಾಂಕರ್ ನಿರ್ಮಿಸಿದರೆ ಇಲಾಖೆಯ ಜವಾಬ್ದಾರಿ ಮುಗಿಯುವುದಿಲ್ಲ. ನೀರು ಸರಬರಾಜು ಆಗುತ್ತದೆಯೋ ಇಲ್ಲೋವೋ ಎನ್ನುವುದನ್ನು ಅಧಿಕಾರಿಗಳು ಮನದಟ್ಟ ಮಾಡಿಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಗುರಿಕಾರ ಅಧಿಕಾರಿಗಳಿಗೆ ತಾಕೀತು ಮಾಡಿದರು

ಕೊರೊನಾ ಏರಿಕೆ:ಕೆಲವು ಪ್ರದೇಶಗಳು ಸೀಲ್ ಡೌನ್ ಎಂದ ಬಿಎಸ್ವೈ

ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್…