ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.
ಅರ್ಜಿದಾರರು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ್ ಸಂಖ್ಯೆ, ಪಾಸ್ ಪೋರ್ಟ ಅಳತೆಯ ಭಾವಚಿತ್ರ, ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಸವಿವರಗಳನ್ನೊಳಗೊಂಡ ದಾಖಲೆಗಳನ್ನು ನಾಗರಿಕ ಸೇವಾ ಕೇಂದ್ರಗಳು ಅಥವಾ ಆನ್ ಲೈನ್ ನಲ್ಲಿ ಸೇವಾಸಿಂಧು ಪೋರ್ಟನಲ್ಲಿಯೇ ಕಡ್ಡಾಯವಾಗಿ ಭರ್ತಿ ಮಾಡಬೇಕು. ಗದಗ ಜಿಲ್ಲೆ ವ್ಯಾಪ್ತಿಯಲ್ಲಿರುವ ಕಲಾವಿದರು ಅಥವಾ ಕಲಾತಂಡದವರು ಮೇ.28 ಬೆಳಿಗ್ಗೆ 10 ಗಂಟೆಯಿAದ ಜೂನ್ 5 ರೋಳಗಾಗಿ sevasindhu.karnataka.gov.in ವೆಬ್ ಸೈಟ್‌ಗೆ ಬೇಟಿ ನೀಡುವ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಲ್ಲಿಸಬಹುದಾಗದೆ
ಅರ್ಜಿದಾರರು ವೃತ್ತಿನಿರತರ ಕಲಾವಿದರಾಗಿರಬೇಕು, ಕನಿಷ್ಟ 35 ವರ್ಷ ಮೇಲ್ಪಟ್ಟಿರಬೇಕು, ಕನಿಷ್ಠ 10 ವರ್ಷಗಳ ಕಾಲ ಕಲಾಸೇವೆ ಮಾಡಿರುವ ಬಗ್ಗೆ ಪ್ರಶಸ್ತಿ ಪತ್ರಗಳು ಹಾಗೂ ಕಡ್ಡಾಯವಾಗಿ ಛಾಯಾಚಿತ್ರ ಮತ್ತು ಸಂಬAಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕು. ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವ ಹಾಗೂ 2020-21ನೇ ಸಾಲಿನಲ್ಲಿ ಧನಸಹಾಯ ಪಡೆದ ಸಂಘ-ಸAಸ್ಥೆಗಳು, ಪದಾಧಿಕಾರಿಗಳು, ವಾದ್ಯಪರಿಕರ, ವೇಷಭೂಷಣ, ಚಿತ್ರಕಲೆ, ಶಿಲ್ಪಕಲೆಗೆ ಪ್ರೋತ್ಸಾಹಧನ ಪಡೆದ ಕಲಾವಿದರು ಈ ಸೌಲಭ್ಯ ಪಡೆಯಲು ಆರ್ಹರಾಗಿರುವುದಿಲ್ಲ.
ಆಯ್ಕೆ ಸಮಿತಿಯು ದಾಖಲಾತಿಯನ್ನು ಪರಿಶೀಲಿಸುವ ಮೂಲಕ ಅರ್ಹ ಫಲಾನುಭವಿಗಳನ್ನು ಅಯ್ಕೆ ಮಾಡಲಾಗುವುದು. ಅರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ಒಂದು ಬಾರಿ ಮಾತ್ರ 3,000 ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ತಪುö್ಪ ಮಾಹಿತಿ ನೀಡಿ ಇದರ ಲಾಭ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಜೂ.14ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆ!

ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಅಮೇರಿಕ ಶ್ವೇತ ಭವನಕ್ಕೂ ಎಂಟ್ರಿ ಕೊಟ್ಟ ಸೋಂಕು!

ಅಮೇರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಮಾಧ್ಯಮ ಕಾರ್ಯದರ್ಶಿಗೆ ಕೊರೋನಾ ವೈರಸ್ ತಗಲಿದೆ. ಶ್ವೇತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕು ತಗಲಿಸಿಕೊಂಡಿರುವ ಎರಡನೇ ವ್ಯಕ್ತಿ ಇವರಾಗಿದ್ದಾರೆ.

ಪಡಿತರ ಚೀಟಿದಾರರಿಗೆ ರಾಗಿ, ಜೋಳ, ತೊಗರಿ, ಹೆಸರುಕಾಳು ವಿತರಣೆ

ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಗಿ, ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿಲ್ಲ ಮೆಣಸಿನಕಾಯಿ ಘಾಟು..! ರೈತರಿಗೆ ತಪ್ಪದ ಪರಿಪಾಟಲು..!

ಕೊರೋನಾ ಕಾಟದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರ ಸಂಕಷ್ಟದ ಬದುಕಿನ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ನಿಮ್ಮ ಉತ್ತರ ಪ್ರಭ ಮಾಡಿದೆ