ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.
ಅರ್ಜಿದಾರರು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ್ ಸಂಖ್ಯೆ, ಪಾಸ್ ಪೋರ್ಟ ಅಳತೆಯ ಭಾವಚಿತ್ರ, ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಸವಿವರಗಳನ್ನೊಳಗೊಂಡ ದಾಖಲೆಗಳನ್ನು ನಾಗರಿಕ ಸೇವಾ ಕೇಂದ್ರಗಳು ಅಥವಾ ಆನ್ ಲೈನ್ ನಲ್ಲಿ ಸೇವಾಸಿಂಧು ಪೋರ್ಟನಲ್ಲಿಯೇ ಕಡ್ಡಾಯವಾಗಿ ಭರ್ತಿ ಮಾಡಬೇಕು. ಗದಗ ಜಿಲ್ಲೆ ವ್ಯಾಪ್ತಿಯಲ್ಲಿರುವ ಕಲಾವಿದರು ಅಥವಾ ಕಲಾತಂಡದವರು ಮೇ.28 ಬೆಳಿಗ್ಗೆ 10 ಗಂಟೆಯಿAದ ಜೂನ್ 5 ರೋಳಗಾಗಿ sevasindhu.karnataka.gov.in ವೆಬ್ ಸೈಟ್‌ಗೆ ಬೇಟಿ ನೀಡುವ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಲ್ಲಿಸಬಹುದಾಗದೆ
ಅರ್ಜಿದಾರರು ವೃತ್ತಿನಿರತರ ಕಲಾವಿದರಾಗಿರಬೇಕು, ಕನಿಷ್ಟ 35 ವರ್ಷ ಮೇಲ್ಪಟ್ಟಿರಬೇಕು, ಕನಿಷ್ಠ 10 ವರ್ಷಗಳ ಕಾಲ ಕಲಾಸೇವೆ ಮಾಡಿರುವ ಬಗ್ಗೆ ಪ್ರಶಸ್ತಿ ಪತ್ರಗಳು ಹಾಗೂ ಕಡ್ಡಾಯವಾಗಿ ಛಾಯಾಚಿತ್ರ ಮತ್ತು ಸಂಬAಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕು. ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವ ಹಾಗೂ 2020-21ನೇ ಸಾಲಿನಲ್ಲಿ ಧನಸಹಾಯ ಪಡೆದ ಸಂಘ-ಸAಸ್ಥೆಗಳು, ಪದಾಧಿಕಾರಿಗಳು, ವಾದ್ಯಪರಿಕರ, ವೇಷಭೂಷಣ, ಚಿತ್ರಕಲೆ, ಶಿಲ್ಪಕಲೆಗೆ ಪ್ರೋತ್ಸಾಹಧನ ಪಡೆದ ಕಲಾವಿದರು ಈ ಸೌಲಭ್ಯ ಪಡೆಯಲು ಆರ್ಹರಾಗಿರುವುದಿಲ್ಲ.
ಆಯ್ಕೆ ಸಮಿತಿಯು ದಾಖಲಾತಿಯನ್ನು ಪರಿಶೀಲಿಸುವ ಮೂಲಕ ಅರ್ಹ ಫಲಾನುಭವಿಗಳನ್ನು ಅಯ್ಕೆ ಮಾಡಲಾಗುವುದು. ಅರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ಒಂದು ಬಾರಿ ಮಾತ್ರ 3,000 ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ತಪುö್ಪ ಮಾಹಿತಿ ನೀಡಿ ಇದರ ಲಾಭ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ…

ನಿವೃತ್ತ ಪ್ರಾಚಾರ್ಯ ಡಿ.ಡಿ. ಕಡೇಮನಿ ನಿಧನ

ಗದಗ: ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ನೆಲ್ಸನ್…

ಪೊಲೀಸ್ ಸಬ್ ಇನ್ಸ್ಪೆಕ್ಟರ್ 545 ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಡಿಯಲ್ಲಿ ಖಾಲಿ ಇರುವ 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಿವಿಲ್ ಹುದ್ದೆಗೆ ಕರ್ನಾಟಕ ರಾಜ್ಯ ಪೊಲೀಸ್ (ಕೆಪಿಎಸ್) ಅರ್ಜಿ ಆಹ್ವಾನಿಸಿದೆ.