ನರೆಗಲ್: ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಇಲ್ಲಿನ ಗ್ರಾಮ ಪಂಚಾಯತಿ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಲಾಗಿತ್ತು.
ಇಂತಹ ಸಂಕಷ್ಟದ ದಿನಗಳಲ್ಲಿಯೂ ಜನರ ರೋಗ್ಯ ಹಾಗೂ ಪ್ರಾಣ ಕಾಪಾಡಲು ಕೊರೊನಾ ವಾರಿಯರ್ಸ್ ಗಳು ಇನ್ನಿಲ್ಲದೇ ಶ್ರಮಿಸುತ್ತಿದ್ದಾರೆ. ಆಶಾ, ಅಂಗನವಾಡಿ, ನರ್ಸ್ ಹಾಗೂ ವೈದ್ಯರು, ಶಿಕ್ಷಕರು ಇತರ ಎಲ್ಲ ವಿಭಾಗದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಪ್ಪ ವಾಲಿ, ವಾರಿಯರ್ಸ್ ಗಳಿಗೆ ಉಪಹಾರ ವ್ಯವಸ್ಥೆ ಮಾಡಿಸಿದ್ದರು. ಈ ವೇಳೆಯಲ್ಲಿ ಪಿಡಿಓ ಎಸ್.ಎಸ್.ರಿತ್ತಿ, ಕಾರ್ಯದರ್ಶಿ ಈರಣ್ಣ ಪತ್ತಾರ, ಆರೋಗ್ಯ ಇಲಾಖೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸಾವಿತ್ರಿ ಹಿರೇವಡೆಯರ, ಪವನ್ ಕುಮಾರ್ ಸಣ್ಣಕ್ಕಿ, ಸದಸ್ಯರಾದ ಬಸವರಾಜ ಶ್ಯಾಶೆಟ್ಟಿ, ಸಂತೋಷ ಕೋರಿ, ಪಂಚಾಯಿತಿ ಸಿಬ್ಬಂದಿ ವರ್ಗದವರು. ಆಶಾ ಕಾರ್ಯಕರ್ತೆಯರು, ಸಂಗಮೇಶ ಮೆಣಸಿಗಿ ಇದ್ದರು.

Leave a Reply

Your email address will not be published. Required fields are marked *

You May Also Like

ದಿನಕ್ಕೆ ಎಷ್ಟು ಬಾರಿ ಮುಖ ತೊಳೆಯಬೇಕು ಗೊತ್ತಾ..?

ಮುಖವು ಪ್ರತಿಯೊಬ್ಬರ ಸೌಂದರ್ಯದ ಕೈಗನ್ನಡಿ. ಮುಖದ ಲಕ್ಷಣ ಕಂಡೇ ಮನುಷ್ಯನ ಗುಣ ಅಳಿಯಬಹುದು ಎನ್ನುತ್ತಾರೆ. ಜೀವನದಲ್ಲಿ ಕಷ್ಟ ಗಳಿಲ್ಲದೆ, ಯಾವುದೇ ಕೆಟ್ಟ ಆಲೋಚನೆಗಳಿಲ್ಲದೆ ಸಂತೋಷವಾಗಿರುವವರ ಮುಖ ನೋಡಲು ಅರಳಿದ ಮಲ್ಲಿಗೆಯಂತೆ ಇರುತ್ತದೆ.

ಕೊರೋನಾ ಕಾವ್ಯ-10

ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ದಾವಣಗೆರೆಯ ನ್ಯಾಯಾಂಗ ಇಲಾಖೆಯ ಉದ್ಯೋಗಿ ಟಿ.ಆರ್.ಹೇಮಂತ್ ಕುಮಾರ್ ಅವರು.

ಗದಗ ಜಿಲ್ಲಾಡಳಿತಕ್ಕೆ 40 ಲಕ್ಷ ವೈದ್ಯಕೀಯ ಸಾಮಾಗ್ರಿ ನೆರವು ನೀಡಿದ ಐಪಿಎಸ್ ಅಧಿಕಾರಿ ಸಜ್ಜನ್.

ಗದಗ: ಮೂಲತಃ ಗದಗ ಜಿಲ್ಲೆಯವರಾದ ತೆಲಂಗಾಣ ರಾಜ್ಯದ ಸೈಬರ್ ಪೋಲಿಸ್ ಆಯುಕ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಅಂದಾಜು 40 ಲಕ್ಷ ಮೌಲ್ಯದ ವೈಧ್ಯಕೀಯ ಔಷಧಿ ಸಾಮಾಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ನೆರವು ನೀಡಿದ್ದಾರೆ.

ವರ್ಕ್ ಫ್ರಮ್ ಹೋಮ್ ಮಾಡಿದವರ ಪರಿಸ್ಥಿತಿಗೆ ಹೇಗಾಗಿದೆ ಗೊತ್ತಾ?

ನವದೆಹಲಿ : ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಹೀಗಾಗಿ ಕಂಪನಿ…