ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

Sign of a waiting taxi

ಪರಿಹಾರ ಧನಕ್ಕಾಗಿ ಅರ್ಹರು ಆನ್‌ಲೈನ್‌ನಲ್ಲಿ ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅರ್ಹ ಫಲಾನುಭಾವಿಗಳಿಗೆ ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ಡಿ.ಬಿ.ಟಿ. ಮುಖಾಂತರ ವರ್ಗಾಯಿಸಲಾಗುವುದು. ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರುಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ : ಅವಿರೋಧ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ ಉಳಿದ ಅವಧಿಗೆ…

ಮಕ್ಕಳಿಗೆ ಕೊರೊನಾ ಚಿಕಿತ್ಸೆ ಬಗ್ಗೆ ಸರ್ಕಾರದ ಬಳಿ ಪ್ರೊಟೊಕಾಲ್ ಇಲ್ವಂತೆ – ಶಾಸಕ ಎಚ್.ಕೆ.ಪಾಟೀಲ್ ಆರೋಪ

ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ಫೆ. 24ರಿಂದ ಮುಳಗುಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಇದೇ ಫೆ 24 ರಿಂದ 26 ವರೆಗೆ ಗವಿಮಠಾಧ್ಯಕ್ಷರಾದ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ, ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

ಶಾಸಕ ಬಂಡಿ ಅವ್ರಿಗೆ ಯಾವುದೇ ಅಸಮಾಧಾನ ಇಲ್ಲಂತ, ಸಚಿವ ಸ್ಥಾನ ಕೊಟ್ರ ಬ್ಯಾಡನಲ್ಲಂತ!

ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ…