ನವದೆಹಲಿ: ಈಗಾಗಲೇ ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕಾಗಿರುವ ಹಿನ್ನೆಲೆ ಸಿಬಿಎಸ್ಇ ದ್ವೀತಿಯ ಪಿಯು ಪರೀಕ್ಷೆಗಳನ್ನು ನಡೆಸಬೇಕೋ ಬೇಡವೋ ಎನ್ನುವ ಕುರಿತಾದ ಚರ್ಚೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಮೇ.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಪರೀಕ್ಷೆ ನಡೆಸುವುದೇ, ಬೇಡವೇ ಎಂಬ ಬಗ್ಗೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ಆಧಾರದ ಮೇಲೆ ವಿಚಾರಣೆಯನ್ನು ಬರುವ ಸೋಮವಾರಕ್ಕೆ ಮುಂದೂಡಿದೆ.
ಸಿಬಿಎಸ್ಇ ಐಸಿಎಸ್ಇಯ 12ನೇ ತರಗತಿ ಪರೀಕ್ಷೆಗಳನ್ನು ಈ ವರ್ಷ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಪರೀಕ್ಷೆಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *

You May Also Like

ಗದಗ – ಬೇಟಗೆರಿ ನಗರಸಭೆಯಲ್ಲಿ ಯಾರಿಗೆ ಎಷ್ಟು ಮತದಾನದ ಪಟ್ಟಿ ಪ್ರಕಟ

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ಮತ ಏಣಿಕೆಯಲ್ಲಿ ಮುಗಿದಿದ್ದು, ಯಾವ ಅಭ್ಯರ್ಥಿಗೆ ಎಷ್ಟು ಮತ ಎಂದು…

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.

ಕೊರೊನಾ ಎಫೆಕ್ಟ್: ಎಂಜನೀಯರಿಂಗ್, ಡಿಪ್ಲೋಮಾ, ಎಂಬಿಎ, ಐಟಿಐ ಉದ್ಯೋಗಿಗಳು ನರೆಗಾ ಕೆಲಸಕ್ಕೆ..!

ಉನ್ನತ ಶಿಕ್ಷಣ ಪಡೆದು ತಿಂಗಳಾದರೆ ಸಾಕು ಕೈತುಂಬ ಸಂಬಳ ಎಣಿಸುತ್ತಿದ್ದವರು ಬದುಕಿನ ಅನಿವಾರ್ಯತೆಗೆ ನರೇಗಾ ಕೂಲಿ ಕೆಲಸಕ್ಕೆ ಹೊರಟಿದ್ದಾರೆ.

ವಾರಾಂತ್ಯದ ಕಫ್ರ‍್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ : ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ರ‍್ಕಾರ ಜಾರಿಗೊಳಿಸಿರುವ ಮರ‍್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ…