ರೋಣ: ತಾಲೂಕಿನ ಹುನಗುಂಡಿ ಗ್ರಾಮದಲ್ಲಿ ಟಾಸ್ಕ್ ಪೋರ್ಸ್ ಸಮಿತಿಯಿಂದ ಕೊರೋನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.

ಈ ವೇಳೆಯಲ್ಲಿ ಗ್ರಾಮಸ್ಥರಿಗೆ ಮಾಸ್ಕ್, ಸ್ಯಾನಿಟೈಜರ್ ವಿತರಣೆ ಮಾಡಿ, ಯಾರು ಅನಗತ್ಯವಾಗಿ ಹೊರಗಡೆ ಬರಬೇಡಿ, ಅನಿವಾರ್ಯ ಕಾರಣದಿಂದ ಹೊರಗಡೆ ಬರಬೇಕಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು ಹಾಗೂ ಮರಳಿ ಮನೆಗೆ ಹೋದ ತಕ್ಷಣ ಕೈ ಕಾಲುಗಳನ್ನು ಸ್ವಚ್ಛವಾಗಿ ಸೋಪ್ ಬಳಸಿ ತೊಳೆದುಕೊಳ್ಳಿ ಎಂದು ತಿಳಿ ಹೇಳಿದರು. ಅಷ್ಟೇ ಅಲ್ಲದೇ ಧ್ವನಿ ವರ್ಧಕದ ಮುಖಾಂತರ ಜಾಗೃತಿ ಮೂಡಿಸುವದರೊಂದಿಗೆ ಮಹಾಮಾರಿ ಕರೋನ ನಿಯಂತ್ರಣಕ್ಕೆ ಮುಂದಾದರು.

ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಬೇಕು. ಹೋಟೆಲ್ ಗಳು ಬಂದ್ ಮಾಡಬೇಕು. ಯಾರಾದ್ರೂ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇನ್ನು ಕಟ್ಟೆಗಳ ಮೇಲೆ ಸಾಮಾಜಿಕ ಅಂತರ ಮರೆತು ಯಾರು ಕೂರದಂತೆ ಸುಟ್ಟ ಎಣ್ಣೆಯನ್ನು ಹಾಕಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ನೇತ್ರಾ ಕಡಿಯವರ, ಉಪಾಧ್ಯಕ್ಷ ಲಲಿತಾ ಕೊರನವರ, ಸದಸ್ಯರಾದ ಜಿ.ಎಸ್. ಮೊಂಡಸೊಪ್ಪಿ, ಆರ್.ಬಿ.ಗೂಳಪ್ಪನವರ, ಎಮ್.ಎಸ್. ಉಮಚಗಿ, ಬಿ.ಸಿ.ಹಿರೇಕಲ್ಲಪ್ಪನವರ, ಕಾರ್ಯದರ್ಶಿ ಎಮ್.ಎಸ್. ಜಂಗಣ್ಣವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಎಸ್.ಬಿ.ಪಾಟೀಲ, ಆರೋಗ್ಯ ಸಿಬ್ಬಂದಿ ಯಶೋಧ ಚೆನ್ನಿ, ಬಸವಂತಪ್ಪ ತಳವಾರ, ಅಂಗನವಾಡಿ ಕಾರ್ಯಕರ್ತೆ ಕವಿತಾ ತಳವಾರ್, ನಾಗಮ್ಮ ನವಚಿದ್ರ, ಗುರುಶಾಂತಮ್ಮ ಹಿರೇಮಠ, ಶಾಂತಾ ಪಾಟೀಲ, ಎಎಸ್ಐ ಎಮ್.ಎಫ್. ಹೆರಕಲ್, ಪೊಲೀಸ್ ಪೇದೆ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಇಲಿಗಳೂ ಸಾರಾಯಿ ಕುಡಿಯುತ್ತವೆ.

ಆ ಟ್ಯೂಬ್ ನಲ್ಲಿ ಇದ್ದ ಸಾರಾಯಿಯನ್ನು ಮುದ್ದೆ ಮಾಲು ಕೊಠಡಿಯಲ್ಲಿ ಇದ್ದ ಇಲಿಗಳು ಕುಡಿದಿವೆ ಅಂತ ಹೇಳಿದ. ಆ ಕೊಠಡಿಯಲ್ಲಿ ಇಲಿ ಇದ್ದದ್ದು ನಿಜ ಆದರೆ ಇಲಿ ಸಾರಾಯಿ ಕುಡಿದಿದ್ದು ಯಾರು ಗಮನಿಸಿಲ್ಲ. ಆದರೂ ಇಲಿ ಸಾರಾಯಿ ಕುಡಿದಿದ್ದು, ನಿಜ..!

ಕರುಳ ಕುಡಿಯ ಜೋಗುಳದಲಿ

ನೋವು! ಯಾತನೆ! ಯಮಯಾತನೆ! ಇಡೀ ದೇಹವನ್ನೇ ಒಳ್ಳಲ್ಲಿ ಹಾಕಿ ಕುಟ್ಟಿದ ಅನುಭವ. ಸಾಕಪ್ಪ ಸಾಕು ಈ ಜೀವನ ಎನಿಸುವಷ್ಟು ವೈರಾಗ್ಯ.ಈ ಬದುಕೇ ಬೇಡ. ತಡೆದುಕೊಳ್ಳಲಾರೆ… ಸಹಿಸಲಾರೆ… ಅನುಭವಿಸಲಾರೆ. ಕಣ್ಣು ಬಿಡಲೂ ತ್ರಾಣವಿಲ್ಲ. ಯಾವುದೋ ಕೈಗಳು ಬಂದು ತಡವುತ್ತಿವೆ. ಹಣೆ ಮುಟ್ಟಿ ನೋಡಿದ ಸ್ಪರ್ಶದ ಅನುಭವ. ಆದರೂ ಕಣ್ಗಳು ಮೆತ್ತಿಕೊಂಡಿವೆ. ನರಳುವುದು, ಮುಲುಗುವುದು, ಒದ್ದಾಡುವುದ ಬಿಟ್ಟರೆ ಏನೂ ಮಾಡಲಾಗದ ಅಸಹಾಯಕತೆ.

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ಕೊರೋನಾ ಸೋಂಕಿತ ಮಹಿಳೆ ಸಾವು

ಕೊರೋನಾ ಸೋಂಕಿತ ಮಹಿಳೆ ಸಾವುವಿಜಯಪುರ : ಕೊರೊನಾ ಪೀಡಿತ ಮಹಿಳೆ ಸಾವನ್ನಪ್ಪಿದ ಘಟನೆ ಇಜಯಪುರ ಜಿಲ್ಲೆಯಲ್ಲಿ…