ರೋಣ: ಕೋವಿಡ್‌ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದ್ದು, ಇದರಲ್ಲಿ ರೋಣ ಕ್ಷೇತ್ರಕ್ಕೂ 5 ಸಾಂದ್ರಕ ವಿತರಿಸಿದ್ದಾರೆ.
ರೋಣ ಶಾಸಕ ಕಳಕಪ್ಪ ಬಂಡಿ ಅವರು ಡಿಸಿಎಂ ಅವರಿಂದ ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ತಮ್ಮ ಕ್ಷೇತ್ರಗಳಿಗೆ ರವಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಸೋಂಕಿತರಿಗೆ ಆಮ್ಲಜನಕ ಸಾಂದ್ರಕಗಳಿಂದ ಹೆಚ್ಚು ಸಹಾಯ ಆಗುತ್ತಿದೆ. ತುರ್ತಾಗಿ ಎಲ್ಲಿಗೆ ಬೇಕಾದರೂ ಕೊಂಡೊಯ್ದು ಸುಲಭವಾಗಿ ಬಳಸಬಹುದಾಗಿದೆ. ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಬಾಗಿಲಿಗೆ ಇವುಗಳನ್ನು ಒದಗಿಸುವ ಕೆಲಸ ಆಗುತ್ತಿದೆ. ರಾಜ್ಯದ ಇತರ ಕಡೆಗೂ ಹೆಚ್ಚಿನ ಅನುಕೂಲ ಆಗಲಿ ಎಂದು ವೈಯಕ್ತಿಕವಾಗಿ ಇವುಗಳನ್ನು ನೀಡುತ್ತಿರುವುದಾಗಿ ಹೇಳಿದರು.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-1

ಕೊರೋನಾ ಕಾವ್ಯ ಸರಣಿಗೆ ಕವನ ಬರೆದವರು ಮುತ್ತು.ಹೆಚ್.ಬಿ(ಶಿಕ್ಷಕರು), ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುತ್ತು, ಭವಿಷ್ಯದ ಭರವಸೆಯ ಶಿಕ್ಷಕ ಮತ್ತು ಬರಹಗಾರ. ಅವರಲ್ಲಿನ ಜನಪರ ಮತ್ತು ಜೀವಪರ ಕಾಳಜಿಯೇ ಈ ಕಾವ್ಯದಲ್ಲಿ ಅಕ್ಷರ ರೂಪದಲ್ಲಿ ಹೊರಹೊಮ್ಮಿದೆ.

ಕೋವಿಡ್ ನಿಯಮ ಉಲ್ಲಂಘನೆ: ಗದಗ ಜಿಲ್ಲೆ ಗ್ರಾಮೀಣ ಭಾಗದಲ್ಲಿ ದಂಡ ವಸೂಲಿ

ಗದಗ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾ ಪಂಚಾಯತಿಯಿAದ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಈ ಕಾರೈಪಡೆ ತಂಡಗಳು ಶುಕ್ರವಾರ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಲಾದ ನಿಯಮಗಳ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲೆ ದಂಡ ವಿಧಿಸುವ ಮೂಲಕ 30 ಸಾವಿರಕ್ಕೂ ಅಧಿಕ ದಂಡ ವಸೂಲಾಯಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದ್ದಾರೆ.

ನರೇಗಲ್ಲ್ ನಲ್ಲಿ ಸಹಾಯಧನ ಬಾರದೆ ಅರ್ಧಕ್ಕೆ ನಿಂತ ಮನೆಗಳು!

ನರೇಗಲ್‌: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯ ಅಡಿಯಲ್ಲಿ 2013/14,2017/18, ಹಾಗೂ 2018/19 ಪಿ.ಎಮ್.ವೈ ಪ್ರಧಾನ ಮಂತ್ರಿ ಆವಾಸ್ ಯೋಜನೆ, ವಾಜಪೇಯಿ ವಸತಿ ಯೋಜನೆ, ಅಂಬೇಡ್ಕರ್ ಆವಾಸ್ ಯೋಜನೆ, ಅಡಿಯಲ್ಲಿ ಐದು ನೂರಕ್ಕೂ ಹೆಚ್ಚು ಫಲಾನುಭವಿಗಳು ಆಯ್ಕೆ ಆಗಿದ್ದು ಹಲವು ವರ್ಷಗಳು ಕಳೆದರು ಯಾವುದೇ ಫಲಾನುಭವಿಗಳಿಗೆ ಸಂಪೂರ್ಣ ಸಹಾಯಧನ ಬಂದಿಲ್ಲ. ಇದರಲ್ಲಿ ಅರ್ಧ ಮನೆಗಳು ಕಟ್ಟಡ ಸಂಪೂರ್ಣ ಮುಗಿದಿದ್ದು ಇನ್ನುಳಿದ ಮನೆಗಳು ಅರ್ಧಕ್ಕೆ ನಿಂತಿವೆ. ಸೂರು ಇಲ್ಲದವರಿಗೆ ಸೂರು ಒದಗಿಸಲು ಅರ್ಜಿ ಆಹ್ವಾನ ಮಾಡಿದ್ದು ಅದರಂತೆ ಅರ್ಜಿಯನ್ನು ಹಾಕಿದ ಫಲಾನುಭವಿಗಳಿಗೆ ಒಂದೊ-ಎರಡು ಕಂತು ಹಣ ಬಂದಿದ್ದು ಇನ್ನುಳಿದ ಕಂತುಗಳ ಸಹಾಯಧನ ಬಾರದೆ ಅರ್ಧಕ್ಕೆ ನಿಂತ ಮನೆಗಳ ಫಲಾನುಭವಿಗಳ ಗೋಳು ಕೇಳೋರು ಯಾರು? ಎನ್ನುವಂತಾಗಿದೆ.

ರೈಲು ಹಳಿ ದುರಂತ: 16 ಸಾವು

ಮಹಾರಾಷ್ಟ್ರ:ನಿನ್ನೆಯಷ್ಟೆ ವಿಶಾಖಪಟ್ಟಣ ದುರಂತದ ಬೆನ್ನಲ್ಲೆ ಇಂದು ಔರಂಗಾಬಾದ್ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿದೆ. ಔರಂಗಾಬಾದ್ ರೈಲು…