ರೋಣ: ಕೋವಿಡ್‌ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದ್ದು, ಇದರಲ್ಲಿ ರೋಣ ಕ್ಷೇತ್ರಕ್ಕೂ 5 ಸಾಂದ್ರಕ ವಿತರಿಸಿದ್ದಾರೆ.
ರೋಣ ಶಾಸಕ ಕಳಕಪ್ಪ ಬಂಡಿ ಅವರು ಡಿಸಿಎಂ ಅವರಿಂದ ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ತಮ್ಮ ಕ್ಷೇತ್ರಗಳಿಗೆ ರವಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಸೋಂಕಿತರಿಗೆ ಆಮ್ಲಜನಕ ಸಾಂದ್ರಕಗಳಿಂದ ಹೆಚ್ಚು ಸಹಾಯ ಆಗುತ್ತಿದೆ. ತುರ್ತಾಗಿ ಎಲ್ಲಿಗೆ ಬೇಕಾದರೂ ಕೊಂಡೊಯ್ದು ಸುಲಭವಾಗಿ ಬಳಸಬಹುದಾಗಿದೆ. ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಬಾಗಿಲಿಗೆ ಇವುಗಳನ್ನು ಒದಗಿಸುವ ಕೆಲಸ ಆಗುತ್ತಿದೆ. ರಾಜ್ಯದ ಇತರ ಕಡೆಗೂ ಹೆಚ್ಚಿನ ಅನುಕೂಲ ಆಗಲಿ ಎಂದು ವೈಯಕ್ತಿಕವಾಗಿ ಇವುಗಳನ್ನು ನೀಡುತ್ತಿರುವುದಾಗಿ ಹೇಳಿದರು.

Leave a Reply

Your email address will not be published. Required fields are marked *

You May Also Like

ಯಪ್ಪ..!, ಚಡ್ಡಿ ಜಗಳ ಈಗ ಕೋರ್ಟಿಗೆ ಬಂದೈತ್ಯಂತ..!

ಚಡ್ಯಾರಾ ಆಗಲಿ, ಪ್ಯಾಂಟರಾ ಆಗಲಿ, ಒಳ ಅಂಗ್ಯಾರ ಆಗಲಿ, ಮೇಲಂಗ್ಯಾರ ಆಗಲಿ, ಏನಾರ ಆಗಲಿ ನಾವು ಹ್ಯಾಂಗ್ ಅಳತಿ ಕೊಟ್ಟಿರತಿವಿ ಹಂಗ ಹೊಲದ್ ಕೊಡೊ ಕೆಲ್ಸಾ ಟೈಲರ್ದು. ಆದ್ರ ನಾನು ‘ಚಂದನ್ ಬಟ್ಟಿ ಕೊಟ್ಟೀನಿ. ಆದ್ರ ಟೇಲರ್ ಗಿಡ್ ಗಿಡ್ ಅಂಡರ್ ವೇರ್ ಹೊಲದಾನ. ಅರೆಸ್ಟು ಮಾಡಿ ಒಗಿರಿ ಅವನ್ನ ಅಂತ ಭೋಪಾಲಿನ್ಯಾಗ ಒಬ್ಬಾಂವ ಪೊಲೀಸರ ಠಾಣಾ ಕಟ್ಟಿ ಹತ್ಯಾನ.

ಅಂದು ವಿಶ್ವ ಕಪ್ ತಂದು ಕೊಟ್ಟ ತಂಡದಲ್ಲಿ ಕ್ರಿಕೆಟಿಗ ಯಶ್ ಪಾಲ್ ಇನ್ನಿಲ್ಲ!

ನವದೆಹಲಿ: 1983 ರಲ್ಲಿ ಭಾರತ ತಂಡ ವಿಶ್ವ ಕಪ್ ತನ್ನ ಮುಡಿಗೇರಿಸಿಕೊಂಡಿತ್ತು. ಇದು ಭಾರತದ ಕ್ರೀಕೆಟ್ ಇತಿಹಾಸದಲ್ಲಿ ಮಹತ್ವದ ವರ್ಷವಾಗಿತ್ತು. ಕ್ರೀಕೆಟ್ ಇತಿಹಾಸದಲ್ಲಿ ಭಾರತಕ್ಕೊಂದು ಮೈಲುಗಲ್ಲಾದ 1983 ರ ವಿಶ್ವಕಪ್ ಪಡೆದ ತಂಡದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ. ಹೌದು, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಸರ್ಕಸ್ ಮಾಡಿದ್ರ ಸರ್ಕಾರ ನಡಿಸಾಕ್ ಆಗುತ್ತೇನು?: ಸರ್ಕಸ್ ಮಾಡಾಕ್ ಹೋಗಿದ್ ಕಿಟ್ಯಾನ್ ಸ್ಥಿತಿ ನೋಡ್ರಿ..!

ಕಟ್ಟಿ ಕಲ್ಲವ್ವ ಮತ್ ಕಿಡಗೇಡಿ ಕಿಟ್ಯಾ ಕಟ್ಟಿಗ್ ಕುಂತ್ ಸರ್ಕಸ್ ಮಾಡಿದ್ರ ಸರ್ಕಾರ ನಡಿಸಬಹುದು ಅಂತ ಪಂಟ್ ಹೊಡದಾರ. ಸರ್ಕಾರ ನಡಸಬೇಕು ಅನ್ನೋ ಭರದಾಗ ಸರ್ಕಸ್ ಮಾಡಾಕ್ ಹೋದ್ ಕಿಟ್ಯಾನ್ ಸ್ಥಿತಿ ಬಗ್ಗೆ ನಿಮ್ಮ ಉತ್ತರಪ್ರಭದ ಕಿಡಗೇಡಿ ಕಿಟ್ಯಾ ಅಂಕಣದಲ್ಲಿ ಹಾಸ್ಯ ಬರಹ

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…