ಗಜೇಂದ್ರಗಡ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ಗಾಂಧಿವಾದಿ ಎಚ್.ಎಸ್. ದೊರೆಸ್ವಾಮಿಯವರನ್ನು ಕಳೆದುಕೊಳ್ಳುವ ಮೂಲಕ ದೇಶದ ಪ್ರಜಾಪ್ರಭುತ್ವ ಇಂದು ಬಡವಾಗಿದೆ ಎಂದು ಮಾಜಿ ಪುರಸಭೆ ಸದಸ್ಯ ಎಂ.ಎಸ್.ಹಡಪದ ಹೇಳಿದರು.
ಪಟ್ಟಣದಲ್ಲಿ ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಸಂಘಟನೆಗಳ ವತಿಯಿಂದ ನಡೆದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ, ಗಳಿಸಿದ ಸ್ವಾತಂತ್ರ್ಯದ ಉಳಿವಿಗಾಗಿ ಹಾಗೂ ಸ್ವಾತಂತ್ರ್ಯದ ಆಶಯಗಳಿಗೆ ಧಕ್ಕೆ ಬಂದಾಗಲೆಲ್ಲಾ ಜೀವನದುದ್ದಕ್ಕೂ ಆಳುವ ಸರ್ಕಾರಗಳ ವಿರುದ್ಧ ರಾಜೀರಹಿತ ಹೋರಾಟ ನಡೆಸಿ, ಜನಸಾಮಾನ್ಯರ ಪರ ದ್ವನಿ ಎತ್ತಿದ ದೊರೆಸ್ವಾಮಿಯವರ ಚಿಂತನೆ ಅಮೋಘ. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದ ಭಾರತದ ಸಮಸ್ಯೆಗಳನ್ನು ತುಂಬಾ ಹತ್ತಿರದಿಂದ ಕಂಡವರಾಗಿದ್ದರು. ಸರ್ಕಾರಗಳು ಸ್ವಾತಂತ್ರ್ಯ ಯೋಧರಿಗೆ ನೀಡುವ ಹಣಕಾಸು ಸಹಯ, ಸವಲತ್ತುಗಳಿಗೆ, ಗೌರವಗಳಿಗೆ ಕೈಚಾಚಿ ನಿಂತವರಲ್ಲ. ಬದಲಿಗೆ ಯಾವುದೇ ಸರ್ಕಾರಗಳು ಜನವಿರೋಧಿ ನೀತಿಗಳನ್ನು ಜಾರಿಗೆ ತಂದಾಗ ಅವರು ಪಕ್ಷ ಬೇದವೆನ್ನದೆ ಜನರ ನಡುವೆ ಬಂದು ಬೀದಿಯಲ್ಲಿ ಕುಳಿತು ಅನ್ಯಾಯದ ವಿರುದ್ಧ ಹೋರಾಟ ಮಾಡಿದವರು. ಅವರ ಹೋರಾಟ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ ಎಂದರು.
ಡಿವೈಎಫ್‌ಐ ಮುಖಂಡ ಫಯಾಜ್ ತೋಟದ ಮಾತನಾಡಿ, ಮೂಲತಃ ಜಾತ್ಯಾತೀತರು ಹಿಂದುತ್ವ ರಾಜಕಾರಣದ ಕೋಮುವಾದಿ ಪ್ಯಾಸಿಸ್ಟ ಕಾರ್ಯಾಸೂಚಿಯನ್ನು ವಿರೋಧಿಸಿದ್ದರು. ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಿಂದ ಮೈಲಿದೂರ ಸರಿದು ಕಾಂಗ್ರೆಸ್ ಅಥವಾ ಇತರೆ ಯಾವುದೇ ಪಕ್ಷವಾಗಲೀ ಅವರನ್ನು ತರಾಟೆಗೆ ತೆಗೆದುಕೊಳ್ಳುವುದನ್ನ ಬಿಡುತ್ತರಲಿಲ್ಲ. ದೇಶ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದರಿಂದ ದೇಶಕ್ಕೆ ಎರಡನೇಯ ಸ್ವಾತಂತ್ರ್ಯ ಹೋರಾಟದ ಅಗತ್ಯವಿದೆ ಎಂದು ಅವರು ದೃಡವಾಗಿ ನಂಬಿದವರಾಗಿದ್ದರು. ಹಲವು ತಲೆಮಾರುಗಳ ನಂತರ ಇಂತಹ ಮನುಷ್ಯ ಈ ಭೂಮಿಯ ಮೇಲೆ ಜೀವಂತವಾಗಿ ನಡೆದಾಡಿದ್ದಾನೆ ಎಂಬುದನ್ನು ನಂಬುವುದು ಕಷ್ಟವಾಗಬವುದು. ಆ ರೀತಿಯಲ್ಲಿ ಬದುಕು ಸಾಗಿಸಿದ ಮಹಾನ್ ವ್ಯಕ್ತಿತ್ವ ಅವರದಾಗಿತ್ತು ಎಂದರು.
ಬಾಲು ರಾಠೋಡ, ಮೈಬುಸಾಬ ಹವಾಲ್ದಾರ, ಫೀರು ರಾಠೋಡ ಇದ್ದರು.

Leave a Reply

Your email address will not be published. Required fields are marked *

You May Also Like

ಕರುಳ ಕುಡಿಯ ಜೋಗುಳದಲಿ

ನೋವು! ಯಾತನೆ! ಯಮಯಾತನೆ! ಇಡೀ ದೇಹವನ್ನೇ ಒಳ್ಳಲ್ಲಿ ಹಾಕಿ ಕುಟ್ಟಿದ ಅನುಭವ. ಸಾಕಪ್ಪ ಸಾಕು ಈ ಜೀವನ ಎನಿಸುವಷ್ಟು ವೈರಾಗ್ಯ.ಈ ಬದುಕೇ ಬೇಡ. ತಡೆದುಕೊಳ್ಳಲಾರೆ… ಸಹಿಸಲಾರೆ… ಅನುಭವಿಸಲಾರೆ. ಕಣ್ಣು ಬಿಡಲೂ ತ್ರಾಣವಿಲ್ಲ. ಯಾವುದೋ ಕೈಗಳು ಬಂದು ತಡವುತ್ತಿವೆ. ಹಣೆ ಮುಟ್ಟಿ ನೋಡಿದ ಸ್ಪರ್ಶದ ಅನುಭವ. ಆದರೂ ಕಣ್ಗಳು ಮೆತ್ತಿಕೊಂಡಿವೆ. ನರಳುವುದು, ಮುಲುಗುವುದು, ಒದ್ದಾಡುವುದ ಬಿಟ್ಟರೆ ಏನೂ ಮಾಡಲಾಗದ ಅಸಹಾಯಕತೆ.

ಕೊರೋನಾ ಕಾವ್ಯ ಸರಣಿ ಆರಂಭ

ಕೊರೋನಾ ಸಂಕಷ್ಟದ ಈ ದಿನಗಳಲ್ಲಿ ಮನೆಯಲ್ಲಿಯೇ ಕಾಲ ಕಳಿಯುತ್ತಾ ಸದಾ ಓದು ಬರಹದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರ ಸಂಖ್ಯೆ ಬಹಳಷ್ಟಿದೆ. ಹೀಗಾಗಿ ಕವಿಗಳಿಗೊಂದು ಸೂಕ್ತ ವೇದಿಕೆ ಕಲ್ಪಿಸಲು ಕೊರೋನಾ ಕಾವ್ಯ ಸರಣಿ ಆರಂಭಿಸಿದ್ದೇವೆ. ಆಸಕ್ತರು ಕೊರೋನಾ ಬಗ್ಗೆ ಬರೆದಿರುವ ಕವನ ಕಳುಹಿಸಬಹುದು.

ಎಣ್ಣೆ ಹೊಡೆದ್ರೆ ಕೊರೋನಾ ಬರಲ್ವಂತೆ!: ವ್ಯಾಟ್ಸಾಪ್ ರಿಸರ್ಚ್: ಆಜ್ ತಕ್ ಚಾನೆಲ್ ಹೀಗೆ ಹೇಳಿತಾ?

ಆಲ್ಕೊಹಾಲ್ ಸೇವನೆಯಿಂದ ಕೋರೊನಾ ಸೋಂಕು ತಗುಲಲಾರದು ಎಂಬ ಸುದ್ದಿ ಜಾಲತಾಣದಲ್ಲಿ ಮೊದಲಿನಿಂದಲೂ ಹರಿದಾಡುತ್ತಿದೆ. ಈಗ ಅದಕ್ಕೆ ಆಜ್ ತಕ್ ಚಾನೆಲ್ ಸ್ಕ್ರೀನ್ ಶಾಟ್ ಅನ್ನು ಆಧಾರವಾಗಿ ನೀಡುತ್ತಿದ್ದಾರೆ ಕೆಲವರು. ವಾಸ್ತವ ಏನು? ಈ ಫ್ಯಾಕ್ಟ್-ಚೆಕ್ ಓದಿ.

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…