ಗಜೇಂದ್ರಗಡ: ಕೋವಿಡ್ ಸೊಂಕಿತರ ಆರೈಕೆಗಾಗಿ ಪಟ್ಟಣದಲ್ಲಿ ತೆರೆಯಲಾಗಿದ್ದ ಕೋವಿಡ್ ಕೇರ್ ಸೆಂಟರ್ ಇದೀಗ ಸಮೀಪದ ಕಾಲಕಾಲೇಶ್ವರ ಗ್ರಾಮ ಬಳಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ.
ಪಟ್ಟಣದ ಕುಷ್ಟಗಿ ರಸ್ತೆಯ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ತಾಲೂಕಾಡಳಿತ ಕೋವಿಡ್ ಸೊಂಕಿತರಿಗೆ ನೆರವಾಗುವ ಉದ್ದೇಶದಿಂದ 50 ಹಾಸಿಗೆಯ ಕೋವಿಡ್ ಕೇರ್ ಸೆಂಟರ ತೆರೆಯಲಾಗಿತ್ತು. ಆದರೆ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ.
ಸಮೀಪದ ಕಾಲಕಾಲೇಶ್ವರ ಗ್ರಾಮ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರರಾಣಿ ಚನ್ನಮ್ಮ ವಸತಿ ನಿಲಯದಲ್ಲಿ 100 ಹಾಸಿಗೆಯ ವ್ಯವಸ್ಥೆ ಕಲ್ಪಿಸಲಾಗಿದೆ. ರೋಣ ತಾಲೂಕಾ ಆರೋಗ್ಯ ಕೇಂದ್ರದಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಜೇಂದ್ರಗಡ ತಾಲೂಕಾಡಳಿತ ಹೆಚ್ಚಿನ ಬೆಡ್‌ಗಳ ವ್ಯವಸ್ಥೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕಂದಾಯ ನಿರೀಕ್ಷಕಿ ಗೌರಮ್ಮ ಆನಂದಪ್ಪನವರ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದಲ್ಲಿನ ಕೋವಿಡ್ ಕೇರ್ ಸೆಂಟರ್ ಇದೀಗ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯಕ್ಕೆ ಸ್ಥಳಾಂತರಿಸಿ, ಎಲ್ಲ ಬೆಡ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಸೊಂಕಿತರನ್ನು ಸಹ ಸ್ಥಳಾಂತರಿಸಲಾಗಿದೆ. ಸೊಂಕಿತರಿಗೆ ಸೊಂಕಿತರಿಗೆ ಊಟೋಪಚಾರ, ವೈದ್ಯಕೀಯ ಚಿಕಿತ್ಸೆ, ಶೌಚಾಲಯ ಸೇರಿ ಎಲ್ಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಜೂನ್ 14ರ ವರೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಜಾರಿ

ಗದಗ: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿoದ ಜೂನ್ 14ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಈ ಅವಧಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ನಿರ್ಬಂಧಿಸಲಾಗಿದೆ ಎಂಬ ಮಾಹಿತಿಯು ಈ ಕೆಳಕಂಡoತಿದೆ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುoದರೇಶ್ ಬಾಬು ತಿಳಿಸಿದ್ದಾರೆ.

ಸರ್ಕಸ್ ಮಾಡಿದ್ರ ಸರ್ಕಾರ ನಡಿಸಾಕ್ ಆಗುತ್ತೇನು?: ಸರ್ಕಸ್ ಮಾಡಾಕ್ ಹೋಗಿದ್ ಕಿಟ್ಯಾನ್ ಸ್ಥಿತಿ ನೋಡ್ರಿ..!

ಕಟ್ಟಿ ಕಲ್ಲವ್ವ ಮತ್ ಕಿಡಗೇಡಿ ಕಿಟ್ಯಾ ಕಟ್ಟಿಗ್ ಕುಂತ್ ಸರ್ಕಸ್ ಮಾಡಿದ್ರ ಸರ್ಕಾರ ನಡಿಸಬಹುದು ಅಂತ ಪಂಟ್ ಹೊಡದಾರ. ಸರ್ಕಾರ ನಡಸಬೇಕು ಅನ್ನೋ ಭರದಾಗ ಸರ್ಕಸ್ ಮಾಡಾಕ್ ಹೋದ್ ಕಿಟ್ಯಾನ್ ಸ್ಥಿತಿ ಬಗ್ಗೆ ನಿಮ್ಮ ಉತ್ತರಪ್ರಭದ ಕಿಡಗೇಡಿ ಕಿಟ್ಯಾ ಅಂಕಣದಲ್ಲಿ ಹಾಸ್ಯ ಬರಹ

I Love You ಅಂತಹೇಳಿದ್ದ ಗೆಳೆಯಾಗ ಗೆಳತಿ ಕೊಟ್ಟಿದ್ದೇನು ಗೊತ್ತಾ..?

ತನ್ನ ಭಾಳ್ ದಿನದ್ ಗೆಳತಿಗೆ ಆತ, ಐಲೌಯು ಅಂತ ಹೇಳಬೇಕು ಅಂದ್ಕೊಂಡಿದ್ನಂತ. ಆದ್ರ ಅವನಿಗೊಂದು ಹುಚ್ಚು. ತಾನು ಐಲೌಯು ಅಂತ ಹೇಳಿದ್ ಕೂಡ್ಲೆ ತನ್ನ ಗೆಳತಿಗೆ ಫುಲ್ ಥ್ರಿಲ್ ಆಗಬೇಕು. ಆಕಿ ಜೀವನದಾಗ ಈ ಘಟನಾ ಮರಿಲಾರದಂತ ಅನುಭವ ಆಗಬೇಕು. ಅಂಥ ಸರ್ಪ್ರೈಜ್ ಕೊಡಬೇಕು ಅನ್ನೋ ಖಯಾಲಿಯೊಳಗ ಒಂದು ಪ್ಲ್ಯಾನ್ ಮಾಡಿದ್ನಂತ. ಐಲೌಯು ಅಂತ ಹೇಳಿದ್ ಕೂಡ್ಲೆ ಮುಂದೇನಾತು ಅನ್ನೋದಾ ಆತ ಮಾಡಿದ ಪ್ಲ್ಯಾನ್ ನ ಕಥಿ ನೋಡ್ರಿ..

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.