ಗಜೇಂದ್ರಗಡ: ಕೋವಿಡ್ ಸೊಂಕಿತರ ಆರೈಕೆಗಾಗಿ ಪಟ್ಟಣದಲ್ಲಿ ತೆರೆಯಲಾಗಿದ್ದ ಕೋವಿಡ್ ಕೇರ್ ಸೆಂಟರ್ ಇದೀಗ ಸಮೀಪದ ಕಾಲಕಾಲೇಶ್ವರ ಗ್ರಾಮ ಬಳಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ.
ಪಟ್ಟಣದ ಕುಷ್ಟಗಿ ರಸ್ತೆಯ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ತಾಲೂಕಾಡಳಿತ ಕೋವಿಡ್ ಸೊಂಕಿತರಿಗೆ ನೆರವಾಗುವ ಉದ್ದೇಶದಿಂದ 50 ಹಾಸಿಗೆಯ ಕೋವಿಡ್ ಕೇರ್ ಸೆಂಟರ ತೆರೆಯಲಾಗಿತ್ತು. ಆದರೆ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ.
ಸಮೀಪದ ಕಾಲಕಾಲೇಶ್ವರ ಗ್ರಾಮ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರರಾಣಿ ಚನ್ನಮ್ಮ ವಸತಿ ನಿಲಯದಲ್ಲಿ 100 ಹಾಸಿಗೆಯ ವ್ಯವಸ್ಥೆ ಕಲ್ಪಿಸಲಾಗಿದೆ. ರೋಣ ತಾಲೂಕಾ ಆರೋಗ್ಯ ಕೇಂದ್ರದಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಜೇಂದ್ರಗಡ ತಾಲೂಕಾಡಳಿತ ಹೆಚ್ಚಿನ ಬೆಡ್ಗಳ ವ್ಯವಸ್ಥೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕಂದಾಯ ನಿರೀಕ್ಷಕಿ ಗೌರಮ್ಮ ಆನಂದಪ್ಪನವರ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದಲ್ಲಿನ ಕೋವಿಡ್ ಕೇರ್ ಸೆಂಟರ್ ಇದೀಗ ಕಿತ್ತೂರ ರಾಣಿ ಚನ್ನಮ್ಮ ವಸತಿ ನಿಲಯಕ್ಕೆ ಸ್ಥಳಾಂತರಿಸಿ, ಎಲ್ಲ ಬೆಡ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಸೊಂಕಿತರನ್ನು ಸಹ ಸ್ಥಳಾಂತರಿಸಲಾಗಿದೆ. ಸೊಂಕಿತರಿಗೆ ಸೊಂಕಿತರಿಗೆ ಊಟೋಪಚಾರ, ವೈದ್ಯಕೀಯ ಚಿಕಿತ್ಸೆ, ಶೌಚಾಲಯ ಸೇರಿ ಎಲ್ಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗಜೇಂದ್ರಗಡ: ಕೋವಿಡ್ ಕೇರ್ ಸೆಂಟರ್ ಸ್ಥಳಾಂತರ

ಗಜೇಂದ್ರಗಡ: ಕೋವಿಡ್ ಕೇರ್ ಸೆಂಟರ್ ಸ್ಥಳಾಂತರ