ಬೆಂಗಳೂರು: ನಗರದಲ್ಲಿ ಬಾಂಗ್ಲಾದೇಶದ ಯುವತಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ಕೇರಳದಲ್ಲಿದ್ದಾರೆಂಬ ಮಾಹಿತಿಯಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ವಿಡಿಯೋ ವೈರಲ್ ಆಗಿತ್ತು, ಕೇಂದ್ರ ಸಚಿವರು ಈ ಬಗ್ಗೆ ಟ್ವೀಟ್ ಮಾಡಿದ್ದರು, ನಮ್ಮ ಪೊಲೀಸರು ಅದನ್ನು ಪತ್ತೆ ಹಚ್ಚಿ ಗ್ಯಾಂಗ್ ನ್ನು ಹಿಡಿದಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಸೇರಿ ಐದು ಜನ ಇದ್ದಾರೆ. ಪೂರ್ಣ ಪ್ರಮಾಣದ ತನಿಖೆಯ ಮೇಲೆ ಸತ್ಯಾಂಶ ಹೊರಬರುತ್ತದೆ ಎಂದರು.
ಗ್ಯಾಂಗ್ ರೇಪ್‌ ನಡೆದ ಲೊಕೇಷನ್ ಗೊತ್ತಿರಲಿಲ್ಲ, ವೈರಲ್ ಆದ ಮೂಲ ಹಿಡಿದು ತನಿಖೆ ನಡೆದಾಗ ಬೆಂಗಳೂರೆಂದು ಗೊತ್ತಾಗಿದೆ. ರಾಮಮೂರ್ತಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಕಮಿಷನರ್ ಅವರೇ ಈ ಪ್ರಕರಣದ ಜಾಲ ಪತ್ತೆ ಹಚ್ಚಲು ನೇತೃತ್ವ ವಹಿಸಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಶರಣೇಗೌಡ ಬಯ್ಯಾಪುರ ಗೆಲುವಿಗೆ ಮಸ್ಕಿಯಲ್ಲಿ ಸಂಭ್ರಮ

 ಉತ್ತರಪ್ರಭ ವರದಿ:ವಿಠ್ಠಲ ಕೆಳೊತ ಮಸ್ಕಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣೇಗೌಡ ಪಾಟೀಲ್ ಬಯ್ಯಾಪೂರು…

ಕಿಯೋನಿಕ್ಸ್ ಅಧ್ಯಕ್ಷರಾಗಿ ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ಆಯ್ಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್…

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗನ್ನು ರಕ್ಷಿಸಿದ ನಟ!

ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.

ಕೊರೋನಾ ಯೋಧರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದು ಏಕೆ?

ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.