ಲಕ್ಷ್ಮೇಶ್ವರ: ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದ ಆರೋಪಿ ಪರಶುರಾಮ ಗೋಣೆಪ್ಪ ಗುಡದರ ಈತನಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವವಾಧಿ ಶಿಕ್ಷೆ ಹಾಗೂ 5000 ದಂಡ ವಿಧಿಸಿದೆ.
ಲಕ್ಷ್ಮೇಶ್ವರ ಪಟ್ಟಣದಲ್ಲಿ 2017 ಜುಲೈ 29ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ರಾಜಶೇಖರ ಪಾಟೀಲ ತೀರ್ಪು ಹೊರಡಿಸಿದ್ದಾರೆ. ಕಟ್ಟಡ ಕಾರ್ಮಿಕನಾಗಿದ್ದ ಪರಶುರಾಮ ಗುಡದರ, ಅಣ್ಣಪ್ಪ ಗಜಕೋಶ ಮತ್ತು ಆತನ ಚಿಕ್ಕಪ್ಪ ಸೋಮನಾಥ ಒಟ್ಟಿಗೆ ಕೆಲಸಕ್ಕೆ ಹೋಗುತ್ತಿದ್ದರು. ಸೋಮನಾಥ ಮದ್ಯ ಸೇವನೆ ಮಾಡಿದಾಗಲೆಲ್ಲಾ ಪರಶುರಾಮ ಗುಡದರ ವಿನಾಕಾರಣ ಜಗಳ ತೆಗೆಯುತ್ತಿದ್ದ. ಅಲ್ಲದೇ ಆತನ ಬಳಿಯಿದ್ದ ಹಣವನ್ನು ಕಿತ್ತುಕೊಳ್ಳುತ್ತಿದ್ದ.
2017 ಜುಲೈ 29ರಂದು ಪರಶುರಾಮ, ಸೋಮನಾಥ ಕಿಸೆಯಿಂದ 120ರೂ. ಕಿತ್ತುಕೊಂಡಿದ್ದ ವಿಷಯ ಕೊಲೆಯಲ್ಲಿ ಅಂತ್ಯಗೊಂಡಿತ್ತು. ಈ ವಿಚಾರವಾಗಿ ಅಣ್ಣಪ್ಪ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರಕರಣದ ತನಿಖೆ ನಡೆದು ಪರಶುರಾಮ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ ಸರಣಿ ಆರಂಭ

ಕೊರೋನಾ ಸಂಕಷ್ಟದ ಈ ದಿನಗಳಲ್ಲಿ ಮನೆಯಲ್ಲಿಯೇ ಕಾಲ ಕಳಿಯುತ್ತಾ ಸದಾ ಓದು ಬರಹದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರ ಸಂಖ್ಯೆ ಬಹಳಷ್ಟಿದೆ. ಹೀಗಾಗಿ ಕವಿಗಳಿಗೊಂದು ಸೂಕ್ತ ವೇದಿಕೆ ಕಲ್ಪಿಸಲು ಕೊರೋನಾ ಕಾವ್ಯ ಸರಣಿ ಆರಂಭಿಸಿದ್ದೇವೆ. ಆಸಕ್ತರು ಕೊರೋನಾ ಬಗ್ಗೆ ಬರೆದಿರುವ ಕವನ ಕಳುಹಿಸಬಹುದು.

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…

ಯಪ್ಪ..!, ಚಡ್ಡಿ ಜಗಳ ಈಗ ಕೋರ್ಟಿಗೆ ಬಂದೈತ್ಯಂತ..!

ಚಡ್ಯಾರಾ ಆಗಲಿ, ಪ್ಯಾಂಟರಾ ಆಗಲಿ, ಒಳ ಅಂಗ್ಯಾರ ಆಗಲಿ, ಮೇಲಂಗ್ಯಾರ ಆಗಲಿ, ಏನಾರ ಆಗಲಿ ನಾವು ಹ್ಯಾಂಗ್ ಅಳತಿ ಕೊಟ್ಟಿರತಿವಿ ಹಂಗ ಹೊಲದ್ ಕೊಡೊ ಕೆಲ್ಸಾ ಟೈಲರ್ದು. ಆದ್ರ ನಾನು ‘ಚಂದನ್ ಬಟ್ಟಿ ಕೊಟ್ಟೀನಿ. ಆದ್ರ ಟೇಲರ್ ಗಿಡ್ ಗಿಡ್ ಅಂಡರ್ ವೇರ್ ಹೊಲದಾನ. ಅರೆಸ್ಟು ಮಾಡಿ ಒಗಿರಿ ಅವನ್ನ ಅಂತ ಭೋಪಾಲಿನ್ಯಾಗ ಒಬ್ಬಾಂವ ಪೊಲೀಸರ ಠಾಣಾ ಕಟ್ಟಿ ಹತ್ಯಾನ.

ಜೂ.1ರ ನಂತರದ ಮತ್ತೆ ಕಠಿಣ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಗದಗ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೋವಿಡ್-19 ಎರಡನೇ ಅಲೆಯ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿ ಮಾಡಿದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಟಾನ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.