ಲಕ್ಷ್ಮೇಶ್ವರ: ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದ ಆರೋಪಿ ಪರಶುರಾಮ ಗೋಣೆಪ್ಪ ಗುಡದರ ಈತನಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವವಾಧಿ ಶಿಕ್ಷೆ ಹಾಗೂ 5000 ದಂಡ ವಿಧಿಸಿದೆ.
ಲಕ್ಷ್ಮೇಶ್ವರ ಪಟ್ಟಣದಲ್ಲಿ 2017 ಜುಲೈ 29ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ರಾಜಶೇಖರ ಪಾಟೀಲ ತೀರ್ಪು ಹೊರಡಿಸಿದ್ದಾರೆ. ಕಟ್ಟಡ ಕಾರ್ಮಿಕನಾಗಿದ್ದ ಪರಶುರಾಮ ಗುಡದರ, ಅಣ್ಣಪ್ಪ ಗಜಕೋಶ ಮತ್ತು ಆತನ ಚಿಕ್ಕಪ್ಪ ಸೋಮನಾಥ ಒಟ್ಟಿಗೆ ಕೆಲಸಕ್ಕೆ ಹೋಗುತ್ತಿದ್ದರು. ಸೋಮನಾಥ ಮದ್ಯ ಸೇವನೆ ಮಾಡಿದಾಗಲೆಲ್ಲಾ ಪರಶುರಾಮ ಗುಡದರ ವಿನಾಕಾರಣ ಜಗಳ ತೆಗೆಯುತ್ತಿದ್ದ. ಅಲ್ಲದೇ ಆತನ ಬಳಿಯಿದ್ದ ಹಣವನ್ನು ಕಿತ್ತುಕೊಳ್ಳುತ್ತಿದ್ದ.
2017 ಜುಲೈ 29ರಂದು ಪರಶುರಾಮ, ಸೋಮನಾಥ ಕಿಸೆಯಿಂದ 120ರೂ. ಕಿತ್ತುಕೊಂಡಿದ್ದ ವಿಷಯ ಕೊಲೆಯಲ್ಲಿ ಅಂತ್ಯಗೊಂಡಿತ್ತು. ಈ ವಿಚಾರವಾಗಿ ಅಣ್ಣಪ್ಪ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರಕರಣದ ತನಿಖೆ ನಡೆದು ಪರಶುರಾಮ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ರೋಣಕ್ಕೆ 5 ಆಮ್ಲಜನಕ ಸಾಂದ್ರಕ ಹಸ್ತಾಂತರಿಸಿದ ಡಿಸಿಎಂ

ರೋಣ: ಕೋವಿಡ್‌ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದ್ದು, ಇದರಲ್ಲಿ ರೋಣ ಕ್ಷೇತ್ರಕ್ಕೂ 5 ಸಾಂದ್ರಕ ವಿತರಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ(NSUI)ಉಪವಾಸ ಸತ್ಯಾಗ್ರಹ

ಉತ್ತರಪ್ರಭ ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ…

ಹಾರಯಿಕೆಯ ಕವಿ ಮತ್ತು ಸಾಹಿತಿ : ಪ್ರೊ.ವಸಂತ ಕುಷ್ಟಗಿಯವರು..!

ಪ್ರೊ.ವಸಂತ ಕುಷ್ಟಗಿಯವರು ತೀರಿದ್ದಾರೆ. ಅವರ ಸಾವಿಗೆ ಕಂಬನಿ ಮಿಡಿಯುತ್ತ ಈ ನೆನಪು ಮಾಡಿಕೊಳ್ಳೋಣ. ಸದ್ಯ ಕಲಬುರ್ಗಿ ನಿವಾಸಿಯಾಗಿದ್ದ ಕವಿ ಮತ್ತು ಸಾಹಿತಿ ವಸಂತ ಕುಷ್ಟಗಿ ಅವರು ಮೂಲತಃ ಹಿಂದಿನ ರಾಯಚೂರು ಜಿಲ್ಲೆ ಕುಷ್ಟಗಿಯವರು. ವಸಂತ ಕುಷ್ಟಗಿ ಅವರು ಜನಿಸಿದ್ದು 1936 ಅಕ್ಟೋಬರ್ 10ರಂದು. ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದ ಅವರು ಪ್ರವೃತ್ತಿಯಿಂದ ಕವಿ-ಲೇಖಕರಾಗಿದ್ದರು.

ಗದಗ ಜಿಲ್ಲಾಡಳಿತಕ್ಕೆ 40 ಲಕ್ಷ ವೈದ್ಯಕೀಯ ಸಾಮಾಗ್ರಿ ನೆರವು ನೀಡಿದ ಐಪಿಎಸ್ ಅಧಿಕಾರಿ ಸಜ್ಜನ್.

ಗದಗ: ಮೂಲತಃ ಗದಗ ಜಿಲ್ಲೆಯವರಾದ ತೆಲಂಗಾಣ ರಾಜ್ಯದ ಸೈಬರ್ ಪೋಲಿಸ್ ಆಯುಕ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಅಂದಾಜು 40 ಲಕ್ಷ ಮೌಲ್ಯದ ವೈಧ್ಯಕೀಯ ಔಷಧಿ ಸಾಮಾಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ನೆರವು ನೀಡಿದ್ದಾರೆ.