ಲಕ್ಷ್ಮೇಶ್ವರ: ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದ ಆರೋಪಿ ಪರಶುರಾಮ ಗೋಣೆಪ್ಪ ಗುಡದರ ಈತನಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವವಾಧಿ ಶಿಕ್ಷೆ ಹಾಗೂ 5000 ದಂಡ ವಿಧಿಸಿದೆ.
ಲಕ್ಷ್ಮೇಶ್ವರ ಪಟ್ಟಣದಲ್ಲಿ 2017 ಜುಲೈ 29ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ರಾಜಶೇಖರ ಪಾಟೀಲ ತೀರ್ಪು ಹೊರಡಿಸಿದ್ದಾರೆ. ಕಟ್ಟಡ ಕಾರ್ಮಿಕನಾಗಿದ್ದ ಪರಶುರಾಮ ಗುಡದರ, ಅಣ್ಣಪ್ಪ ಗಜಕೋಶ ಮತ್ತು ಆತನ ಚಿಕ್ಕಪ್ಪ ಸೋಮನಾಥ ಒಟ್ಟಿಗೆ ಕೆಲಸಕ್ಕೆ ಹೋಗುತ್ತಿದ್ದರು. ಸೋಮನಾಥ ಮದ್ಯ ಸೇವನೆ ಮಾಡಿದಾಗಲೆಲ್ಲಾ ಪರಶುರಾಮ ಗುಡದರ ವಿನಾಕಾರಣ ಜಗಳ ತೆಗೆಯುತ್ತಿದ್ದ. ಅಲ್ಲದೇ ಆತನ ಬಳಿಯಿದ್ದ ಹಣವನ್ನು ಕಿತ್ತುಕೊಳ್ಳುತ್ತಿದ್ದ.
2017 ಜುಲೈ 29ರಂದು ಪರಶುರಾಮ, ಸೋಮನಾಥ ಕಿಸೆಯಿಂದ 120ರೂ. ಕಿತ್ತುಕೊಂಡಿದ್ದ ವಿಷಯ ಕೊಲೆಯಲ್ಲಿ ಅಂತ್ಯಗೊಂಡಿತ್ತು. ಈ ವಿಚಾರವಾಗಿ ಅಣ್ಣಪ್ಪ ಪೊಲೀಸರಿಗೆ ದೂರು ನೀಡಿದ್ದಾನೆ. ಪ್ರಕರಣದ ತನಿಖೆ ನಡೆದು ಪರಶುರಾಮ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ

ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ಸೇವಾಭಾವದ ಅದಮ್ಯ ಚೇತನ ಶಿವಾನಂದ ಪಟ್ಟಣಶೆಟ್ಚರ

ಬರಹ : ಗುಲಾಬಚಂದ ಆರ್. ಜಾಧವ, ಚಿತ್ರಕಲಾ ಶಿಕ್ಷಕ, ಆಲಮಟ್ಟಿಆಲಮಟ್ಟಿ : ಊಟ,ನಿದಿರೆಯ ಪರಿವಿಲ್ಲ. ಕೆಲಸಗಳನ್ನು…

ಒತ್ತಡ ನಿವಾರಣೆಗೆ ಸಂಗೀತ

ಮಾನವ ಸಂಘ ಜೀವಿ ಸಮಾಜದಲ್ಲಿದ್ದುಕೊಂಡು ಹೊಂದಿಕೊoಡು ಜೀವನ ಸಾಗಿಸುತ್ತಿದ್ದಾನೆ. ಈ ಜೀವನ ಸಾಗಿಸುವುದಕ್ಕಾಗಿ ದಿನಂಪ್ರತಿ ದೇಹ ಮತ್ತು ಬುದ್ಧಿಯನ್ನು ದಂಡಿಸಿ ದುಡಿಯುತ್ತಲೇ ಇದ್ದಾನೆ. ಈ ದಣಿದ ದೇಹ ಮತ್ತು ಬುದ್ಧಿಗೆ ವಿಶ್ರಾಂತಿ ನೀಡಲು ಅವನು ಮೊರೆ ಹೋಗುವುದು ಮನರಂಜನೆಯನ್ನು.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…