ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಒಡಿಶಾದಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.

ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಭಾರತದ ಪೂರ್ವ ಕರಾವಳಿಗೆ ಬುಧವಾರ ಬಂದಪ್ಪಳಿಸಿದ ಯಾಸ್ ಚಂಡಮಾರುತದಿಂದ ನಾಲ್ವರು ಮೃತಪಟ್ಟಿದ್ದು, ಸಾಕಷ್ಟು ಮನೆಗಳು ಹಾನಿಗೀಡಾಗಿವೆ. ನೆರೆ ಬಂದು ರೈತರ ಜಮೀನುಗಳು ಕೊಚ್ಚಿ ಹೋಗಿವೆ. ಇದಕ್ಕೂ ಮೊದಲು ಭದ್ರತೆ ಕಾರಣದಿಂದ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್ ನ 21 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಚಂಡಮಾರುತ ಅಪ್ಪಳಿಸಿದ ನಂತರ ಗುರುವಾರ ರಾಜ್ಯಾದ್ಯಂತ ಭಾರೀ ಮಳೆಯಾಗಿದೆ. ಇದರಿಂದ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿದಿದೆ. ಒಡಿಶಾದ ನಾಲ್ಕು ಜಿಲ್ಲೆಗಳಾದ ಭದ್ರಕ್, ಕೆಂದ್ರಪಾರ, ಕಿಯೊಂಜಿಹಾರ್ ಮತ್ತು ಜೈಪುರಗಳಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಲಾಗಿತ್ತು ಎಂದು ಪ್ರಧಾನಿಗೆ ಒಡಿಶಾ ಸಿಎಂ ಮಾಹಿತಿ ನೀಡಿದರು.
ವಿಮಾನ ನಿಲ್ದಾಣಕ್ಕೆ ಆರಂಭಿಸಿದ್ದ ಪ್ರಧಾನಿಯನ್ನು ರಾಜ್ಯಪಾಲ ಗಣೇಶಿ ಲಾಲ್, ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್ ಮತ್ತು ಪ್ರತಾಪ್ ಸಾರಂಗಿ ಬರಮಾಡಿಕೊಂಡರು.

Leave a Reply

Your email address will not be published. Required fields are marked *

You May Also Like

ಉಪ ಚುನಾವಣೆ ಫಲಿತಾಂಶ ನಾಳೆ – ರಾಜರಾಜೇಶ್ವರಿ ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ!

ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118…

ಕೌಜಗೇರಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷೆಯಾಗಿ ಸಾವಿತ್ರಮ್ಮ ಅವಿರೋಧ ಆಯ್ಕೆ

ರೋಣ: ತಾಲ್ಲೂಕಿನ ಕೌಜಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಆಯ್ಕೆಯ ಅಂಗವಾಗಿ ಮಂಗವಾರ ಚುನಾವಣಾ ಪ್ರಕ್ರಿಯೆ ಜರುಗಿತು.…

ಗಳಿಕೆ ರಜೆ ನಗದಿಕರಣ ರದ್ದು!

ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೋವಿಡ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.