ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

odisha cm and pm meeting

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಒಡಿಶಾದಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.

ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಭಾರತದ ಪೂರ್ವ ಕರಾವಳಿಗೆ ಬುಧವಾರ ಬಂದಪ್ಪಳಿಸಿದ ಯಾಸ್ ಚಂಡಮಾರುತದಿಂದ ನಾಲ್ವರು ಮೃತಪಟ್ಟಿದ್ದು, ಸಾಕಷ್ಟು ಮನೆಗಳು ಹಾನಿಗೀಡಾಗಿವೆ. ನೆರೆ ಬಂದು ರೈತರ ಜಮೀನುಗಳು ಕೊಚ್ಚಿ ಹೋಗಿವೆ. ಇದಕ್ಕೂ ಮೊದಲು ಭದ್ರತೆ ಕಾರಣದಿಂದ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಜಾರ್ಖಂಡ್ ನ 21 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಚಂಡಮಾರುತ ಅಪ್ಪಳಿಸಿದ ನಂತರ ಗುರುವಾರ ರಾಜ್ಯಾದ್ಯಂತ ಭಾರೀ ಮಳೆಯಾಗಿದೆ. ಇದರಿಂದ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿದಿದೆ. ಒಡಿಶಾದ ನಾಲ್ಕು ಜಿಲ್ಲೆಗಳಾದ ಭದ್ರಕ್, ಕೆಂದ್ರಪಾರ, ಕಿಯೊಂಜಿಹಾರ್ ಮತ್ತು ಜೈಪುರಗಳಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಲಾಗಿತ್ತು ಎಂದು ಪ್ರಧಾನಿಗೆ ಒಡಿಶಾ ಸಿಎಂ ಮಾಹಿತಿ ನೀಡಿದರು.
ವಿಮಾನ ನಿಲ್ದಾಣಕ್ಕೆ ಆರಂಭಿಸಿದ್ದ ಪ್ರಧಾನಿಯನ್ನು ರಾಜ್ಯಪಾಲ ಗಣೇಶಿ ಲಾಲ್, ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್ ಮತ್ತು ಪ್ರತಾಪ್ ಸಾರಂಗಿ ಬರಮಾಡಿಕೊಂಡರು.

Exit mobile version