ಗದಗ: ಮೂಲತಃ ಗದಗ ಜಿಲ್ಲೆಯವರಾದ ತೆಲಂಗಾಣ ರಾಜ್ಯದ ಸೈಬರ್ ಪೋಲಿಸ್ ಆಯುಕ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಅಂದಾಜು 40 ಲಕ್ಷ ಮೌಲ್ಯದ ವೈಧ್ಯಕೀಯ ಔಷಧಿ ಸಾಮಾಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ನೆರವು ನೀಡಿದ್ದಾರೆ.

ಆಕ್ಸಿಜನ್ ಕಾನ್ಸ್ಂಟ್ರೇಟರ್ (22), ಆಕ್ಸಿಜನ ಸಿಲಿಂಡರ್ (84), ಕೋವಿಡ್ ಕಿಟ್ (2000), ಮಾಸ್ಕ (20000), ಸ್ಯಾನಿಟೈಸರ್ (200 ಲೀಟರ್), ಫೇಸ್‌ಶೀಲ್ಡ್ (1000), ರೆಮಿಡಿಸಿವರ್ (24 ಯುನಿಟ್) ಸೇರಿದಂತೆ ಇತರ ಔಷಧಿ ಸಾಮಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರ ಸಹೋದರ ಹುಬ್ಬಳ್ಳಿಯ ಸಾಯಿ ಮಲ್ಟಿಸ್ಪೇಷಾಲಿಟಿ ಕ್ಲಿನಿಕ್‌ನ ಡಾ.ಎಂ.ಸಿ.ಸಜ್ಜನರ ಅವರು ಶುಕ್ರವಾರ ಜಿಲ್ಲಾಡಳಿತದ ಭವನದ ಆವರಣದಲ್ಲಿ ವೈಧ್ಯಕೀಯ ಔಷಧಿ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

You May Also Like

ಅದ್ದೂರಿಯಾಗಿ ನಡೆದ ಹುಚ್ಚೀರಪ್ಪಜ್ಜನ ರಥೋತ್ಸವ

ಕೋಡಿಕೊಪ್ಪದ ಹುಚ್ಚೀರಪ್ಪಜ್ಜನ ರಥೋತ್ಸವವು ಸೋಮವಾರ ಸಂಜೆ ಸಾವಿರಾರು ಭಕ್ತರ ನಡುವೆ ಅದ್ದೂರಿಯಾಗಿ ವೈಭವದಿಂದ ಜರುಗಿತು.

ಗದಗ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 228 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು ಈವರೆಗೆ 128 ಕೇಸ್ ಗಳು. 96 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ

ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ

ಜೀವ, ಜೀವನ ಮತ್ತು ಆರ್ಥಿಕತೆ ಮೇಲೆ ಕರೋನಾ ಪರಿಣಾಮ

ಕರೋನಾ ಮಾನವನ ಮೇಲೆ ಬೀರುವ ಪ್ರಭಾವವನ್ನು ವಿಶ್ವ ಕಣ್ಣಾರೆ ಕಂಡಿದೆ. ಇನ್ನು ರೂಪಾಂತರಿ ಕೊರೋನಾ ವೈರಸ್ ಕೊಡುತ್ತಿರುವ ಕಾಟವೂ ಅಷ್ಟಿಷ್ಟಲ್ಲ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಸರಕಾರಕ್ಕೆ ಆತಂಕ ಸೃಷ್ಟಿಸಿದೆ.ಮತ್ತೊಂದೆಡೆ ಕೊರೋನಾ ವೈರಸ್ ಮನುಷ್ಯನ ದೇಹದ ಮೇಲೆ ಅದರಲ್ಲಿಯೂ ಮಕ್ಕಳು, ಯುವಕರ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮತ್ತೊಂದಿಷ್ಟು ಅಧ್ಯಯನಗಳು ನಡೆದಿವೆ.