ಗದಗ: ಮೂಲತಃ ಗದಗ ಜಿಲ್ಲೆಯವರಾದ ತೆಲಂಗಾಣ ರಾಜ್ಯದ ಸೈಬರ್ ಪೋಲಿಸ್ ಆಯುಕ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಅಂದಾಜು 40 ಲಕ್ಷ ಮೌಲ್ಯದ ವೈಧ್ಯಕೀಯ ಔಷಧಿ ಸಾಮಾಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ನೆರವು ನೀಡಿದ್ದಾರೆ.

ಆಕ್ಸಿಜನ್ ಕಾನ್ಸ್ಂಟ್ರೇಟರ್ (22), ಆಕ್ಸಿಜನ ಸಿಲಿಂಡರ್ (84), ಕೋವಿಡ್ ಕಿಟ್ (2000), ಮಾಸ್ಕ (20000), ಸ್ಯಾನಿಟೈಸರ್ (200 ಲೀಟರ್), ಫೇಸ್‌ಶೀಲ್ಡ್ (1000), ರೆಮಿಡಿಸಿವರ್ (24 ಯುನಿಟ್) ಸೇರಿದಂತೆ ಇತರ ಔಷಧಿ ಸಾಮಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರ ಸಹೋದರ ಹುಬ್ಬಳ್ಳಿಯ ಸಾಯಿ ಮಲ್ಟಿಸ್ಪೇಷಾಲಿಟಿ ಕ್ಲಿನಿಕ್‌ನ ಡಾ.ಎಂ.ಸಿ.ಸಜ್ಜನರ ಅವರು ಶುಕ್ರವಾರ ಜಿಲ್ಲಾಡಳಿತದ ಭವನದ ಆವರಣದಲ್ಲಿ ವೈಧ್ಯಕೀಯ ಔಷಧಿ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

You May Also Like

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ

ನಮ್ಮ ಸಂಸ್ಕೃತಿ ಅನುಸರಿಸಿ : ಪ್ರಹ್ಲಾದ ಹೊಸಳ್ಳಿ

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ದೇಶದ ಧರ್ಮ, ಸಂಸ್ಕೃತಿಯನ್ನು ಅನುಸರಿಸಿ, ಯುವ ಜನತೆ ಒಕ್ಕಟ್ಟಿನಿಂದ ಸಮಾಜಕ್ಕೆ ಗೌರವ ತರುವಂತಹ ಕಾರ್ಯಚಟುವಟಿಕೆಗಳನ್ನು ಮಾಡಬೇಕೆಂದು ತಾಲೂಕ ಪಂಚಾಯತ ಮಾಜಿ ಸದಸ್ಯ ಪ್ರಹ್ಲಾದ ಹೊಸಳ್ಳಿ ಹೇಳಿದರು.

ಗದಗ ಜಿಲ್ಲೆಯಲ್ಲಿ ಒಂದೇ ದಿನ 105 ಬೈಕ್ ಸೀಜ್: 71 ಕೇಸ್ ದಾಖಲು

ಗದಗ: ಜಿಲ್ಲೆಯಾದ್ಯಂತ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದಾಗ್ಯೂ ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 105 ವಾಹನಗಳನ್ನು ಸೀಜ್ ಮಾಡಿ, ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ 71 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಎಸ್ಪಿ ಯತೀಶ್ ಎನ್ ತಿಳಿಸಿದ್ದಾರೆ.