ಹುಬ್ಬಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನಿರ್ವಹಣೆಗಾಗಿ ಏನೆಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತೋ ಆ ಕೆಲಸ ಸರ್ಕಾರ ಮಾಡಲಿಲ್ಲ. ಈಗಲೂ ಮಾಡಿಕೊಂಡಿಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಆಕ್ಸಿಜನ್ ಬೆಡ್, ಐಸಿಯು ಬೆಡ್ ಸಿಗ್ತಿಲ್ಲ. ಇದರಿಂದ ಸಾಕಷ್ಟು ಜನ ಸಾವನ್ನಪ್ಪುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮರಾಜನಗರದ ಸಾವಿನ ಅಂಕಿ ಸಂಖ್ಯೆಯಲ್ಲಿ ಮೊದಲು ಸುಳ್ಳು ಹೇಳಿದ್ದಾರೆ.
ಸಂಬಂಧ ಪಟ್ಟ ಮಂತ್ರಿ ಏಕೆ ಸುಳ್ಳು ಹೇಳಿದ್ರು? ಎಲ್ಲಾ ಕಡೆ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ ಎಂದು ಸರ್ಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ. ಸಚಿವ ಯೋಗೀಶ್ವರ ಲೂಟಿ ಹೊಡೆಯುವ ಖಾತೆ ಕೇಳ್ತಾ ಇದ್ದಾರಂತೆ, ಇದನ್ನ ಬಿಜೆಪಿ ಶಾಸಕರೇ ಹೇಳ್ತಾ ಇದ್ದಾರೆ. ನಾಯಕತ್ವ ಬದಲಾವಣೆ ನಂತ್ರ ಸರ್ಕಾರ ಪತನವಾಗುವದಿಲ್ಲ. ಮುಖ್ಯಮಂತ್ರಿ ಆಗುವ ಸಮರ್ಥ ವ್ಯಕ್ತಿ ಬಿಜೆಪಿಯಲ್ಲಿ ಯಾರು ಇಲ್ಲ‌ ಎಂದರು.
ದೇಶದಲ್ಲಿಯೇ ರೇಪ್ ಕೇಸ್‌ನಲ್ಲಿ ಆರೋಪಿಯನ್ನು ಬಂಧಿಸದೇ ಇರೋ ಪ್ರಕರಣ ಅಂದ್ರೆ ಅದು ರಮೇಶ್ ಜಾರಕಿಹೊಳಿ ಪ್ರಕರಣ ಎಂದರೆ ತಪ್ಪಾಗಲಿಕ್ಕಿಲ್ಲ. ಒಬ್ಬ ರೋಪಿಯನ್ನು ಗೃಹ ಸಚಿವರು ಭೇಟಿಯಾಗ್ತಾರೆ ಅಂದ್ರೆ ಏನ್ ಅರ್ಥ? ಹೀಗಾಗಿ ಗೃಹ ಸಚಿವ ಬೊಮ್ಮಾಯಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ಹಳಿ ತಪ್ಪಿದ ನಿಯಂತ್ರಣ: ರಾಜ್ಯದಲ್ಲಿಂದು 2798 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿಂದು 2798 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36216…

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ಸಚಿವ ಜಗದೀಶ್ ಶೆಟ್ಟರ್ ಮಗನಿದ್ದ ಕಾರು ಅಪಘಾತ!

ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರನಿದ್ದ ಕಾರು ಅಪಘಾತಕ್ಕೆ ಈಡಾಗಿರುವ ಘಟನೆ ನಗರದ ಹಳೆಯ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…