ಲಕ್ಷ್ಮೇಶ್ವರ: ಕರೋನಾ ಮಹಾಮಾರಿಯ ನಿಯಂತ್ರಣಕ್ಕಾಗಿ ಜಿಲ್ಲೆಯಾದ್ಯಂತ ವಿಧಿಸಲಾಗಿರುವ ಕಠಿಣ ಲಾಕ್ಡೌನ್ ಗೆ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಹಾಗೂ ಪಟ್ಟಣದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಐದು ದಿನದ ಕಾಲ ನಗರದಲ್ಲಿ ಕಠಿಣ ಲಾಕ್ಡೌನ್ ವಿಧಿಸಲಾಗಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದಲ್ಲಿ ಲಾಕ್ಡೌನ್ ಸ್ಥಿತಿಗತಿಯನ್ನು ಪರಿಶೀಲನೆ ಮಾಡಲು ಜಿಲ್ಲಾ ಪರೀಕ್ಷಾರ್ಥ ಅಸಿಸ್ಟೆಂಟ್ ಕಮಿಷನರ್ ಮಹಮ್ಮದ್ ಗೌಸ್ ಕೈಸರ್ ಭೇಟಿ ನೀಡಿದ್ದರು.
ನಗರದ ಪ್ರಮುಖ ಸ್ಥಳಗಳನ್ನು ಪರಿಶೀಲನೆ ಮಾಡಿ, ಸವಣೂರ ರಸ್ತೆಯ ನಾಕಾಬಂದಿ, ಹುಬ್ಬಳ್ಳಿ ರಸ್ತೆಯ ನಾಕಾಬಂದಿಯು ಮೂಲಕ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಹಾಗೂ ಕಾರ್ ಡ್ರೈವರ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಕೆಲವೊಂದಿಷ್ಟು ವಾಹನಗಳಿಗೆ ದಂಡ ವಿಧಿಸಲು ಹಾಗೂ ಸೀಜ್ ಮಾಡಲು ಸೂಚಿಸಿದರು.
ಲಕ್ಷ್ಮೇಶ್ವರ ಹೊರವಲಯದ ಹುಬ್ಬಳ್ಳಿ ರಸ್ತೆಯ ಲಿಟಲ್ ಹಾರ್ಟ್ ಶಾಲೆ ಹತ್ತಿರ ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್ ಹಾಕಿ ಪಟ್ಟಣದ ಕಡೆಗೆ ಬರುವ ವಾಹನಗಳನ್ನ ಪರಿಶೀಲಿಸಿದರು.
ಈ ವೇಳೆ ಮಾತನಾಡಿ ಅವರು, ವಿನಾಕಾರಣ ಬೇಕಾಬಿಟ್ಟಿಯಾಗಿ ಓಡಾಡುವಂತಹ ವಾಹನಗಳಿಗೆ ದಂಡ ವಿಧಿಸಿ ಹಾಗೂ ಅನಗತ್ಯ ಸಂಚರಿಸುವ ವಾಹನಗಳನ್ನು ಸೀಜ್ ಮಾಡಲು ತಿಳಿಸಿದರು. ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದ್ದರಿಂದಾಗಿ ತಾಲೂಕಿನ ಗ್ರಾಮೀಣ ಭಾಗದ ಜನರ ಸಂಚಾರ ಸ್ತಬ್ಧವಾಗಿತ್ತು. ಆದರೆ ನೆರೆಯ ಜಿಲ್ಲೆಯ ಜನರ ಸಂಚಾರವೇ ಹೆಚ್ಚಾಗಿ ಕಂಡು ಬಂದಿತು.
ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ, ತಹಸಿಲ್ದಾರ್ ಎಸ್.ಆರ್. ಶಿದ್ದನಗೌಡರ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳಿಗೆ ದಂಡ ವಿಧಿಸಿ ಬಿಸಿಮುಟ್ಟಿಸಿದರು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ, ಪುರಸಭೆ ಕಂದಾಯ ನಿರೀಕ್ಷಕ ಬಸವರಾಜ ಬಳಗಾನೂರ, ಸಿದ್ದಣ್ಣ ಬಾಲೆಹೊಸೂರು, ಗ್ರಾ.ಲೆ ಶಿರೋಳ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಮತ್ತು ಶಿಕ್ಷಕ ಸಿಬ್ಬಂದಿ, ಗ್ರಾಮಸಹಾಯಕರು ಉಪಸ್ಥಿತರಿದ್ದರು.

ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್, ಸವಣೂರು ರೋಡ್, ಪಾದಗಟ್ಟಿ, ಬಜಾರ್ ರೋಡ್, ಸರಾಫ್ ಬಜಾರ್ ಹಾಗೂ ಹುಬ್ಬಳ್ಳಿ ರಸ್ತೆಯ ಲಿಟಲ್ ಹಾರ್ಟ್ ಸ್ಕೂಲ್ ಹತ್ತಿರ ಸೂಕ್ತ ಬಂದೋಬಸ್ತ್ ಮಾಡಲಾಯಿತು. ಜನರಿಲ್ಲದೆ ರಸ್ತೆಗಳೆಲ್ಲ ಬಿಕೋ ಎನ್ನುತ್ತಿದ್ದವು. ಆಸ್ಪತ್ರೆ ಹಾಗೂ ಔಷಧ ಅಂಗಡಿಗಳ ಹೊರತುಪಡಿಸಿ ಇನ್ನುಳಿದ ಅಂಗಡಿಗಳ ವ್ಯಾಪಾರ-ವಹಿವಾಟು ಬಂದ್ ಮಾಡಲಾಗಿತ್ತು.

Leave a Reply

Your email address will not be published. Required fields are marked *

You May Also Like

ಲಕ್ಕುಂಡಿ ಗ್ರಾಮ ಪಂಚಾಯತಿಗೆ ಆಡಳಿತಾಧಿಕಾರಿ ಯಾರು..?

ಗದಗ: ಅವಧಿ ಮುಗಿದ್ರು ಚೇರಿನ ವ್ಯಾಮೋಹ ಮುಗಿಲ್ಲವೇ..? ಆಡಳಿತಾಧಿಕಾರಿ ನೇಮಕವಾದ್ರು, ಅಧ್ಯಕ್ಷ ಪದವಿಯ ಅವಧಿ ಮುಗಿದಿರೋದು…

ಕೊರೊನಾ ಸಮಯದಲ್ಲಿ ನಿಮ್ಮ ತಲೆನೋವಿನ ಸಮಸ್ಯೆಯನ್ನು ಹಗುರವಾಗಿ ಪರಿಗಣಿಸಬೇಡಿ! (ಉತ್ತರ ಪ್ರಭ ವಿಶೇಷ)

ಬೆಂಗಳೂರು : ಜಗತ್ತಿನಾದ್ಯಂತ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದು ತೊಡ್ಡ ಆತಂಕಕ್ಕೆ ಕಾರಣವಾಗುತ್ತಿದೆ. ಅಷ್ಟೇ ಅಲ್ಲದೇ, ದಿನದಿಂದ ದಿನಕ್ಕೆ ಸೋಂಕಿನ ಲಕ್ಷಣಗಳು ಕೂಡ ಬದಲಾಗುತ್ತಿವೆ.

ವರ್ಕ್ ಫ್ರಮ್ ಹೋಮ್ ಮಾಡಿದವರ ಪರಿಸ್ಥಿತಿಗೆ ಹೇಗಾಗಿದೆ ಗೊತ್ತಾ?

ನವದೆಹಲಿ : ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಹೀಗಾಗಿ ಕಂಪನಿ…

ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.