ಬೆಂಗಳೂರು: ಕೊರೋನಾ 2ನೇ ಅಲೆಯ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮೊದಲ ಅಲೆಯಲ್ಲಿ ನೀಡಲಾಗಿದ್ದ ಕೋವಿಡ್ ರಿಸ್ಕ್ ಭತ್ಯೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಸರ್ಕಾರ ಕೋವಿಡ್ ರಿಸ್ಕ್ ಭತ್ಯೆಯನ್ನು ಆರು ತಿಂಗಳ ಕಾಲ ನೀಡಲು ಮುಂದಾಗಿದೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಯ.ಶಿವಶಂಕರ್ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೋವಿಡ್ ರಿಸ್ಕ್ ಅಲೋಯೆನ್ಸ್ ನೀಡಲು ಈಗಾಗಲೇ ಅನುಮತಿಸಲಾದ ಹುದ್ದೆಗಳಿಗೆ ಮಾತ್ರ ಅನ್ವಯವಾಗುವಂತೆ 6 ತಿಂಗಳ ಅವಧಿಗೆ (ದಿನಾಂಕ 01-04-2021 ರಿಂದ ದಿನಾಂಕ 30-09-2021ರವರೆಗೆ) ಈ ಹಿಂದೆ ನಿಗದಿಪಡಿಸಲಾಗಿದ್ದ ಕೋವಿಡ್ ರಿಸ್ಕ್ ಭತ್ಯೆ ನೀಡಲು ಹಾಗೂ ಸ್ಟಾಫ್ ನರ್ಸ್ ಗಳಿಗೆ ಸಂಬಂಧಿಸಿದಂತೆ ಈ ಆದೇಶ ಜಾರಿಯಾದ ದಿನಾಂಕದಿಂದ ದಿನಾಂಕ 30-09-2021ರವರೆಗೆ ರೂ. 8,000ಗಳ ಕೋವಿಡ್ ರಿಸ್ಕ್ ಭತ್ಯೆ ನೀಡಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞರು, ವೈದ್ಯರು, ಸಿಬ್ಬಂದಿಗಳಿಗೆ ದಿನಾಂಕ 21-09-2021ರಲ್ಲಿ ಮಂಜೂರು ಮಾಡಿದ್ದ ಕೋವಿಡ್ ರಿಸ್ಕ್ ಭತ್ಯೆಯನ್ನು ದಿನಾಂಕ 01-04-2021ರಿಂದ ಮುಂದಿನ 6 ತಿಂಗಳ ಅವಧಿಗೆ ಅಥವಾ ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲು ಹಾಗೂ ಸ್ಟಾಫ್ ನರ್ಸ್ ಗಳಿಗೆ ಸಂಬಂಧಿಸಿದಂತೆ ಮಾತ್ರ ರೂ. 8,000ಗಳ ರಿಸ್ಕ್ ಅಲೋಯೆನ್ಸ್ ಅನ್ನು ಈ ಆದೇಶ ಜಾರಿಯಾದ ದಿನಾಂಕದಿಂದ ನಿಡಲು ಅನುಮತಿ ನೀಡಿ ಆದೇಶಿಸಲಾಗಿದೆ.
ಇದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವಂತ ವೈದ್ಯರು, ತಜ್ಞರಿಗೆ ರೂ.10,000, ಶುಶ್ರೂಷಕಿಯರಿಗೆ ರೂ.8,000, ಪ್ರಯೋಗ ಶಾಲಾ ತಂತ್ರಜ್ಞರಿಗೆ ರೂ.5,000 ಮತ್ತು ಪಿಪಿಇ ಕಿಟ್ ಧರಿಸದೇ ಕೋವಿಡ್ ಆಸ್ಪತ್ರೆಗಳ ಹೊರಗಡೆ ಕಾರ್ಯನಿರ್ವಹಿಸುವ ಗ್ರೂಪ್-ಡಿ ನೌಕರರಿಗೆ ರೂ.3,000 ಕೋವಿಡ್ ರಿಸ್ಕ್ ಪ್ರೋತ್ಸಾಹಧನ ಸಿಗಲಿದೆ.

Leave a Reply

Your email address will not be published. Required fields are marked *

You May Also Like

ಬಗರ್ ಹುಕುಮ್ ಸಾಗುವಳಿದಾರರ ಸಮಸ್ಯೆಗಳನ್ನು ಶಾಸಕ ಹಾಗೂ ಮಾಜಿ ಸಚಿವ ಎಚ್ ಕೆ ಪಾಟೀಲರೊಂದಿಗೆ – ಹೋರಾಟಗಾರರಾದ ರವಿಕಾಂತ ಅಂಗಡಿ ಚರ್ಚೆ

ಉತ್ತರಪ್ರಬ ಸುದ್ದಿಗದಗ: ಬಗರ್ ಹುಕುಮ ಸಾಗುವಳಿದಾರರು, ಅರಣ್ಯ ಹಕ್ಕು ಅಧಿನಿಯಮದಡಿಯಲ್ಲಿ, ಗದಗ ಜಿಲ್ಲೆಯ ಲಕ್ಷ್ಮೇಶ್ವರ, ಶಿರಹಟ್ಟಿ,…

ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!

ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.

ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು

ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಸಿಡಿಲು ಬಡಿದು ಬಾಲಕಿ ಸಾವು

ಸಿಡಿಲು ಬಡಿದ ಪರಿಣಾಮ ಬಾಲಕಿಯೋರ್ವಳು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗೆದಗೇರಿ ತಾಂಡಾದಲ್ಲಿ ನಡೆದಿದೆ.