ಲಕ್ಷ್ಮೇಶ್ವರ: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು ಎನ್ನುವ ಉದ್ದೇಶದಿಂದ ಹಳ್ಳಿಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಯಿತು. ಆದರೆ ಸ್ಥಳೀಯ ಮಟ್ಟದಲ್ಲಿ ನಿರ್ವಹಣೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಇದ್ದೂ ಇಲ್ಲದಂತಾಗಿದೆ.
ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯತಿಯ ಎರಡನೇ ವಾರ್ಡಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದು ಇಲ್ಲದಂತಿದೆ. ಸುಮಾರು ನಾಲ್ಕು ವರ್ಷಗಳಿಂದ ಪ್ರಾರಂಭಗೊಂಡಿಲ್ಲ. ಜನರ ಉಪಯೋಗಕ್ಕೆ ಬಾರದ ಹಿನ್ನೆಲೆ ಸಾಕಷ್ಟು ಬಾರಿ ಸಂಬಂಧಿಸಿದವರಿಗೆ ಹೇಳಿದರೂ ಕೂಡ ಪ್ರಯೋಜನವಾಗಿಲ್ಲ ಎನ್ನುವುದು ಸ್ಥಳೀಯರ ಆರೋಪ.
ಸ್ಥಳೀಯ ಗ್ರಾಮ ಪಂಚಾಯತಿ ಜನರಿಗೆ ಮೂಲ ಸೌಕರ್ಯ ಒದಗಿಸಿ ಗ್ರಾಮದ ಜನರನ್ನು ಆರೋಗ್ಯವಂತರನ್ನಾಗಿಸುವುದಾಗಿದೆ. ಗ್ರಾಮೀಣ ಭಾಗದ ಜನರು ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವಂತಾಗಲಿ ಎನ್ನುವ ಕಾರಣಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆ. ಆದರೆ ಸ್ಥಳೀಯ ಆಡಳಿತ ಯಂತ್ರದ ನಿಷ್ಕಾಳಜಿಯಿಂದಾಗಿ ಹಾಗೂ ನಿರ್ವಹಣೆಯ ಕೊರತೆಯಿಂದಾಗಿ ಆದರಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮಾತ್ರ ದೆ. ಆದರೆ ಶುದ್ಧ ನೀರು ಮಾತ್ರ ಮರೀಚಿಕೆಯಾಗಿದೆ.
ಕುಡಿಯುವ ನೀರಿಗಾಗಿ ಊರಿನ ಸಮೀಪದ ಹಳ್ಳದ ನೀರಿಗೆ ಮೊರೆ ಹೋಗಬೇಕಾದ ಪರಿಸ್ಥಿತಿ ಆದರಹಳ್ಳಿ ಗ್ರಾಮಸ್ಥರಿಗೆ ಬಂದೊದಗಿದೆಯಂತೆ. ಗ್ರಾಮದಲ್ಲಿ ಪ್ಲೋರೈಡ್ ನೀರಿನ ಬಳಕೆಯಿಂದ ಜನರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಜನರ ಆರೋಗ್ಯ ದೃಷ್ಟಿಯಿಂದ ಸರಕಾರ ಸಾವಿರಾರು ಕೋಟಿ ಹಣ ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ವಿನಿಯೋಗಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು ಇದಕ್ಕೆ ಇಚ್ಛಾಶಕ್ತಿಯನ್ನು ತೋರದಿರುವುದು ಮುಖ್ಯ ಕಾರಣವಾಗಿದೆ. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಇಂತಹ ಯೋಜನೆಗಳು ವಿಫಲವಾಗುತ್ತಿವೆ ಎಂಬುದಕ್ಕೆ ಈ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವೇ ಸಾಕ್ಷಿ.

ಅಧಿಕಾರಿಗಳ ಲೆಕ್ಕದಲ್ಲಿ ಇಂತಹ ಘಟಕಗಳು ಪ್ರಾರಂಭವಾಗದೆ ಜನೋಪಯೋಗಿಯಾಗದೆ ಹಾಗೆ ಉಳಿದಿವೆ. ಆದರೆ ಒಳಗಿನ ವಾಸ್ತವ ಸ್ಥಿತಿಯೇ ಬೇರೆಯಾಗಿರುತ್ತದೆ ಎನ್ನುವುದು ಸ್ಥಳೀಯರ ಅಸಮಾಧಾನ. ನಾಲ್ಕು ವರ್ಷವಾದರೂ ಇನ್ನೂ ಪ್ರಾರಂಭಗೊಳ್ಳದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಗೊಂಡಿದ್ದರೂ ಯಾಕೆ ಪ್ರಾರಂಭಗೊಂಡಿಲ್ಲ? ಈ ಕುರಿತು ಅಧಿಕಾರಿಗಳನ್ನು ಹಾಗೂ ಅಧ್ಯಕ್ಷರು ಸರ್ವ ಸದಸ್ಯರುಗಳನ್ನು ಕೇಳಿದರೆ ಕೆಲ ತಾಂತ್ರಿಕ ತೊಂದರೆಗಳಿಂದಾಗಿ ವಿಳಂಭವಾಗಿದೆ ಆದಷ್ಟು ಬೇಗ ಪ್ರಾರಂಭಿಸಲಾಗುವುದು ಎಂಬ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಆದರಹಳ್ಳಿ ಗ್ರಾಮದ ಎರಡನೇ ವಾರ್ಡಿನ ಸಾರ್ವಜನಿಕರು ತಮ್ಮ ಸಮಸ್ಯೆಯನ್ನು ವಿವರಿಸಿದರು.

Leave a Reply

Your email address will not be published. Required fields are marked *

You May Also Like

ಗ್ರಾ.ಪಂ ಸದಸ್ಯರ ಸರ್ವಾಧಿಕಾರ ಖಂಡಿಸಿ ರೈತರ ಆಕ್ರೋಶ

ಉತ್ತರಪ್ರಭ ಮುಳಗುಂದ: ಗ್ರಾಮ ಪಂಚಾಯ್ತಿ ಯಿಂದ ಕೇಂದ್ರ ಸರ್ಕಾರದ ವರೆಗೂ ಕಾರ್ಯವೈಕರಿಯನ್ನ ಪ್ರಶ್ನಿಸುವ ಮತ್ತು ಸೌಲಭ್ಯಗಳನ್ನ…

ಆದ್ರಳ್ಳಿ ವಡ್ಡರಪಾಳ್ಯ ಸಮಸ್ಯೆ ವಾರದೊಳಗೆ ಪರಿಹರಿಸದಿದ್ರೆ ಹೋರಾಟ: ರವಿಕಾಂತ ಅಂಗಡಿ

ದಶಕದಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿರುವ ಆದ್ರಳ್ಳಿಯ ವಡ್ಡರಪಾಳ್ಯ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಆಡಳಿತ ವರ್ಗ ಮುಂದಾಗಬೇಕು.

ಡಾ. ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಉಪಹಾರ ವ್ಯವಸ್ಥೆಗೆ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರು ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಮದ್ಯಾಹ್ನದ ಲಘು ಉಪಹಾರ ವ್ಯವಸ್ಥೆಗೆ ಚಾಲನೆ ನೀಡಿದರು. ಈ ವೇಳೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದ ಈ ಕಾರ್ಯ ಸಂಕಷ್ಟದಲ್ಲಿರುವ ನಿರ್ಗತಿಕರಿಗೆ ಸಹಾಯವಾಗಲಿದೆ ಎಂದರು.

ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ

ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.