ದೆಹಲಿ: ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದು ಗುಜರಾತ್, ರಾಜಸ್ಥಾನ, ಛತ್ತೀಸ್ಘಾಡ್ಸೇರಿದಂತೆ 13 ಜಿಲ್ಲೆಗಳಲ್ಲಿ ನೆಲೆನಿಂತ ಹಿಂದೂ, ಸಿಖ್, ಜೈನ, ಬೌದ್ಧ ಹಾಗು ಮುಸ್ಲಿಮೇತರರಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಭಾರತ ಸರ್ಕಾರ ಅರ್ಜಿ ಆಹ್ವಾನಿಸಿದೆ.
1955ರ ಪೌರತ್ವ ಕಾಯ್ದೆ ಅಡಿಯಲ್ಲಿ ಮತ್ತು 2009 ರ ಕಾನೂನಿನಡಿಯಲ್ಲಿ ರೂಪಿಸಲಾದ ನಿಯಮಗಳಡಿಯಲ್ಲಿ ಈ ಆದೇಶವನ್ನು ಅನುಷ್ಠಾನಗೊಳಿಸಲು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. 2019 ರಲ್ಲಿ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಗೆ ಇದು ಸಂಬಂಧಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
2019 ರ ಪೌರತ್ವ ತಿದ್ದು ಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಸರ್ಕಾರ ಇನ್ನೂ ನಿಯಮಗಳನ್ನು ರೂಪಿಸಿಲ್ಲ. ಇದು ಜಾರಿಗೆ ಬಂದಾಗ, ದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆಗಳು ನಡೆದವು. ದೆಹಲಿಯಲ್ಲಿ 2020ರ ಆರಂಭದಲ್ಲಿ ಹಿಂಸಾಚಾರವೇ ನಡೆದಿತ್ತು.ದೇಶಾದ್ಯಂತ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೂ 2020 ಡಿಸೆಂಬರ್ನಲ್ಲಿ ಸಿಎಎ ಅಂಗೀಕರಿಸಲ್ಪಟ್ಟಿತು.
ಇದೀಗ ಭಾರತ ಸರ್ಕಾರ 1955ರ ಪೌರತ್ವ ಕಾಯ್ದೆ ಅಡಿಯಲ್ಲಿ ಮೊರ್ಬಿ, ರಾಜ್ ಕೋಟ್, ಪಠಾಣ್, ವಡೋದರಾ, ದುರ್ಗ್ ,ಛತ್ತೀಸ್ ಗಢದ ಬಾಲೋಡಬಜಾರ್, ಜಾಲೊರ್, ಉದಯ್ ಪುರ, ಪಾಲಿ,ಬರ್ಮೆರ್, ಮತ್ತು ರಾಜಸ್ಥಾನದ ಶಿರೊಹಿ, ಹರಿಯಾಣದ ಪರಿದಾಬಾದ್, ಪಂಜಾಬ್ ನ ಜಲಂಧರ್ ಜಿಲ್ಲೆಯಲ್ಲಿ ವಾಸಿಸುತ್ತಿರುವ ನಿರಾಶ್ರಿತರು ಭಾರತೀಯ ಪೌರತ್ವ ಪಡೆಯಲು ಅರ್ಜಿಸಲ್ಲಿಸಲು ಅರ್ಹರಾಗಿದ್ದಾರೆಂದು ತಿಳಿಸಲಾಗಿದೆ. ಹಾಗು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗನ್ನು ರಕ್ಷಿಸಿದ ನಟ!

ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.

ಚೀನಾ ಸಂಘರ್ಷ ಅಂತ್ಯ – ಸೇನೆ ಹಿಂಪಡೆಯಲು ನಿರ್ಧಾರ!

ನವದೆಹಲಿ : ಚೀನಾ ಸಂಘರ್ಷದ ಬಳಿಕ ಉಂಟಾಗಿದ್ದ ಗಂಭೀರ ಪರಿಸ್ಥಿತಿಯನ್ನು ತಿಳಿಗೊಳಿಸುವ ಭಾರತ ಮತ್ತು ಚೀನಾ ಸೇನಾ ಮುಖ್ಯಸ್ಥರ ಪ್ರಯತ್ನಕ್ಕೆ ಮಹತ್ವದ ಜಯ ಲಭಿಸಿದ್ದು, ಎರಡೂ ಸೇನಾ ಮುಖ್ಯಸ್ಥರು ತಮ್ಮ ಸೈನಿಕರನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…

ಪುದುಚೇರಿಯಲ್ಲಿ ನಾರಾಯಣ ಸ್ವಾಮಿ ಸರ್ಕಾರ ಪತನ!

ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.