ಗದಗ: ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಗದಗ ಶಹರ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮೇ‌ 1ರಂದು ನಗರದ ಡಂಬಳ ನಾಕಾ ಬಳಿ ಇರುವ ರೇಣುಕಾ ಆಟೋಮೊಬೈಲ್ಸ್ ಎದುರಿಗೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿತ್ತು. ಈ ಕುರಿತು ಬೈಕ್ ಮಾಲಿಕ ಗಂಗಾಧರ ಮಟ್ಟಿ‌ ಶಹರ ಠಾಣೆಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿ ಸೀತಾಲಹರಿ ಗ್ರಾಮದ ಸೋಮು ಪೂಜಾರನನ್ನು ಬಂಧಿಸಿ ಕಳ್ಳತನವಾಗಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ.

ಲಕ್ಷ್ಮೇಶ್ವರ ರಸ್ತೆಯ ರಿಂಗ್ ರೋಡ್ ಬಳಿ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಯುವಕನನ್ನು ವಶಕ್ಕೆ ಪಡೆದ ವಿಚಾರಣೆ ನಡೆಸಿದಾಗ ಯುವಕ ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ.
ಗದಗ ಎಸ್ಪಿ ಯತೀಶ್ ಎನ್, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ್, ಸರ್ಕಲ್ ಇನ್ಸ್‌ಪೆಕ್ಟರ್ ಪಿ.ವ್ಹಿ ಸಾಲಿಮಠ ಮಾರ್ಗದರ್ಶನದಲ್ಲಿ, ಶಹರ ಠಾಣೆಯ ಪಿಎಸ್ಐ ಜಿ.ಟಿ ಜಕ್ಕಲಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ವ್ಹಿ.ಎಸ್. ಶೆಟ್ಟಣ್ಣವರ್, ಎಸ್ ಎ ಗುಡ್ಡಿಮಠ, ಪಿ ಎಸ್ ಕಲ್ಲೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸಿಬ್ಬಂದಿಗಳ ಈ ಕಾರ್ಯವನ್ನು ಎಸ್ಪಿ ಯತೀಶ್ ಎನ್ ಪ್ರಶಂಶಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು

ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.

ಲಾರಿ ಡಿಕ್ಕಿ ಸ್ಥಳದಲ್ಲಿಯೇ ಯುವತಿ ಸಾವು

ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ  ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ  ಹೊಡೆದು ಯುವತಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆಗೆ ನಡೆದಿದೆ.

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ರೋಣದಲ್ಲಿ ಪ್ರಾಣಿಗಳ ಹಸಿವು ನೀಗಿಸಿ ಮಾನವೀಯತೆ ಮೆರೆದ ಎಎಸ್ಐ ಎಚ್.ಎಮ್.ಸರ್ವಿ

ನಗರದ ಬಸ್ ನಿಲ್ದಾಣದ ಹತ್ತಿರ ಬೀಡು ಬಿಟ್ಟಿರುವ ಕೋತಿಗಳಿಗೆ ಬಾಳೆ ಹಣ್ಣು ನೀಡುವ ಮೂಲಕ ಎಎಸ್ಐ ಒಬ್ಬರೂ ಮಾನವೀಯತೆ ಮೆರೆದ ಘಟನೆ ರೋಣದಲ್ಲಿ ನಡೆದಿದೆ.