ಬಡ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಪ್ರೊ.ತಾರಾ

ಗದಗ: ಕೊರೊನಾದ ಈ ಸಂಕಷ್ಟದಲ್ಲಿ ಅದೆಷ್ಟೋ ಜನರು ಬಡ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಕೆಲವರು ಪ್ರಾಮಾಣಿಕ ಸಹಾಯ ಮಾಡಿದರೆ ಇನ್ನು ಕೆಲವರ ಸಹಾಯದ ಉದ್ದೇಶವೇ ಬೇರೆಯದ್ದಾಗಿರುತ್ತದೆ. ಆದರೆ ಕಾಲೇಜು ಉಪನ್ಯಾಸಕಿಯೊಬ್ಬರು ಹಳ್ಳಿಯೊಂದರ ನೂರಾರು ಕುಟುಂಬಕ್ಕೆ ದಿನಸಿ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಲಾಕ್ ಡೌನ್ ಹಿನ್ನೆಲೆ ದುಡಿಯುವ ಕೈಗಳು ಕೆಲಸವಿಲ್ಲದೇ ಮನೆಯಲ್ಲಿ ಉಳಿದಿದುಕೊಂಡಿದ್ದಾರೆ. ಇದರಿಂದಾಗಿ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿರುವ 100 ಬಡ ಕುಟುಂಬಗಳಿಗೆ ಪ್ರಾಧ್ಯಾಪಕಿ ತಾರಾ ಅವರು ತಮ್ಮ ಸ್ವಂತ ಹಣದಿಂದ ಆಹಾರ ಕಿಟ್‌ ವಿತರಿಸಿ ಮಾನವೀಯತೆ ಮೆರೆದಿದರು.

ಮಲ್ಲಸಮುದ್ರ ಗ್ರಾಮದಲ್ಲಿರುವ ಬಡ ಕುಟುಂಬಗಳ ಮನೆ ಮನೆಗೆ ತೆರಳಿ ಸಕ್ಕರೆ, ಟೀ ಫೌಡರ್‌, ಎಣ್ಣೆ ಪಾಕೇಟ್‌, ರವಾ, ಅವಲಕ್ಕಿ, ಗೋಧಿ ಹಿಟ್ಟು ಸೇರಿದಂತೆ ಇತರೇ ದಿನಸಿಗಳ ಕಿಟ್‌ ಸಿದ್ಧಪಡಿಸಿ ವಿತರಿಸಿದರು. ಪ್ರಾದ್ಯಾಪಕಿಯ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಯಿತು.

Leave a Reply

Your email address will not be published. Required fields are marked *

You May Also Like

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲೇ ಪರೀಕ್ಷಿಸಿ ಸೋಂಕಿತರ ಸಂಖ್ಯೆ ಕಡಿಮೆಗೊಳಿಸಲು ಪ್ರಯತ್ನ ನಡೆದಿದೆ

ನರೇಗಲ್‌: ಕೊರೊನಾ ವೈರಸ್ ಪಟ್ಟಣದಿಂದ ಹಳ್ಳಿಯ ಕಡೆಗೆ ಗಣನೀಯವಾಗಿ ಹಬ್ಬಿದ್ದು, ಇದನ್ನು ತಡೆಗಟ್ಟಲು ಸರ್ಕಾರ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಉಪಯೋಗವನ್ನು ಕೊರೊನಾ ಸೋಂಕಿತರು ಪಡೆದುಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ:ಎ,ಡಿ,ಸಾಮುದ್ರಿ ಹೇಳಿದ

ಕುರಿಗಾಹಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ರಾಜ್ಯದಲ್ಲಿ ಕುರಿಗಾಹಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ತಾಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಸ್ಥಳೀಯ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ

ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.