ಗಜೇಂದ್ರಗಡ: ಸಮೀಪದ ಗೋಗೇರಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯ ಸಂಘಟನೆ ವತಿಯಿಂದ ಬಡವರಿಗೆ ಆಹಾರದ ಕಿಟ್ ವಿತರಿಸಲಾಯಿತು.
ಕರವೇ ಯುವ ಸೈನ್ಯ ರಾಜ್ಯಾಧ್ಯಕ್ಷ ಕೆ.ಎಸ್.ಕೊಡತಗೇರಿ ಮಾತನಾಡಿ, ಕೋವಿಡ್ ಎರಡಲೇ ಅಲೆ ಜನಸಾಮಾನ್ಯರನ್ನು ಬೆಂಬಿಡದೇ ಕಾಡುತ್ತಿದೆ. ಇದರಿಂದ ಬಡ ಹಾಗೂ ಮದ್ಯಮ ವರ್ಗದ ಜನರು ಬದುಕುವುದು ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಬಡವರ ನೆರವಿಗೆ ಧಾವಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಸರ್ಕಾರ ಬಡವರಿಗಾಗಿ ವಿಶೇಷ ಕಿಟ್ ವಿತರಣೆಗೆ ಮುಂದಾಗಬೇಕಿದೆ. ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ನೊಂದವರ ಧ್ವನಿಯಾಗಿ ನಿಲ್ಲುವ ಮೂಲಕ ಆತ್ಮಸ್ಥೆöÊರ್ಯ ತುಂಬುವ ಕಾರ್ಯವಾಗಬೇಕಿದೆ ಎಂದರು.
ಗ್ರಾಪA ಸದಸ್ಯ ರಾಜಕುಮಾರ ಚೋಪಡೆ ಮಾತನಾಡಿ, ಕೋವಿಡ್ ಹೊಡೆದೂಡಿಸಲು, ಸಮುದಾಯ ಸನ್ನದ್ದರಾಗಬೇಕು. ಗ್ರಾಮೀಣ ಭಾಗದ ಜನರು ಹೆಚ್ಚಿನ ಜಾಗೃತಿ ವಹಿಸುವುದು ಅಗತ್ಯವಾಗಿದ್ದು, ಆರೋಗ್ಯದ ಹಿತ ದೃಷ್ಟಿಯಿಂದ ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ ಎಂದರು.
ಆರ್.ಕೆ ಬಾಗವಾನ, ಮೌನೇಶ ಭೋಸಲೆ, ಮಲ್ಲಿಕಾರ್ಜುನ ಗಾರಗಿ, ಆಯ್.ಎಚ್ ಬಾಗವಾನ, ಕಟ್ಟೆಪ್ಪ ಮಾದರ, ಸದಾಶಿವನಗೌಡ ಪಾಟೀಲ, ಶೇಖರಪ್ಪ ಯಗರಿ, ಕಳಕಪ್ಪ ಮೇಟಿ, ಕಳಕಪ್ಪ ಭೋಸಲೆ, ಗವಿಯಪ್ಪ ಗಾರಗಿ, ಶಿವಾಜಿ ಹೊರಪೇಟಿ ಇದ್ದರು.

Leave a Reply

Your email address will not be published. Required fields are marked *

You May Also Like

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಗದಗ ಜಿಲ್ಲೆ ಕೊರೋನಾ ಗ್ರಹಣ-2:ಈ ಕರಾಳ 24 ದಿನದ ಸರಾಸರಿ: ದಿನಕ್ಕೆ 11 ಪಾಸಿಟಿವ್, 3 ದಿನಕ್ಕೊಂದು ಸಾವು

ಮಂಗಳವಾರ ಗದಗ ಜಿಲ್ಲೆಯಲ್ಲಿ 9 ಹೊಸ ಕೋರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 331ಕ್ಕೆ ಏರಿದೆ. ಸಕ್ರಿಯ ಕೇಸ್ಗಳ ಸಂಖ್ಯೆ 143ಕ್ಕೆ ಏರಿದೆ. ಈ ಹಿಂದಿನ 23 ದಿನಗಳಲ್ಲಿ ಸೋಂಕು ಪ್ರಸರಣದ ತೀವ್ರತೆಯನ್ನು ಶೇಕಡಾವಾರು ಲೆಕ್ಕದಲ್ಲಿ ಸೋಮವಾರ ಪ್ರಕಟಿಸಿದ್ದೆವು.

ಡಾ. ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಉಪಹಾರ ವ್ಯವಸ್ಥೆಗೆ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರು ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಮದ್ಯಾಹ್ನದ ಲಘು ಉಪಹಾರ ವ್ಯವಸ್ಥೆಗೆ ಚಾಲನೆ ನೀಡಿದರು. ಈ ವೇಳೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದ ಈ ಕಾರ್ಯ ಸಂಕಷ್ಟದಲ್ಲಿರುವ ನಿರ್ಗತಿಕರಿಗೆ ಸಹಾಯವಾಗಲಿದೆ ಎಂದರು.

ಭಾರತದ ಏಕೈಕ ‘ಬಂಗಾರದ ಹುಲಿ’ ನೋಡಿದ್ದೀರಾ?: ಚಿನ್ನದ ಮೈಬಣ್ಣ, ಕೆಂಪು-ಕಂದು ಪಟ್ಟಿಗಳ ಸುಂದರಿ!

ಇದು ಅಪರೂಪದ ಹುಲಿ. ದೇಶದಲ್ಲಿ ಈಗ ಒಂದೇ ಒಂದು ಉಳಿದಿದೆ. ಅಸ್ಸಾಮಿನ ಅರಣ್ಯದಲ್ಲಿ ಖ್ಯಾತ ವನ್ಯಜೀವಿ ಫೋಟೊಗ್ರಾಫರ್ ಒಬ್ಬರು ಸೆರೆ ಹಿಡಿದ ಚಿತ್ರಗಳಿವು.