ಗಜೇಂದ್ರಗಡ: ಸಮೀಪದ ಗೋಗೇರಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯ ಸಂಘಟನೆ ವತಿಯಿಂದ ಬಡವರಿಗೆ ಆಹಾರದ ಕಿಟ್ ವಿತರಿಸಲಾಯಿತು.
ಕರವೇ ಯುವ ಸೈನ್ಯ ರಾಜ್ಯಾಧ್ಯಕ್ಷ ಕೆ.ಎಸ್.ಕೊಡತಗೇರಿ ಮಾತನಾಡಿ, ಕೋವಿಡ್ ಎರಡಲೇ ಅಲೆ ಜನಸಾಮಾನ್ಯರನ್ನು ಬೆಂಬಿಡದೇ ಕಾಡುತ್ತಿದೆ. ಇದರಿಂದ ಬಡ ಹಾಗೂ ಮದ್ಯಮ ವರ್ಗದ ಜನರು ಬದುಕುವುದು ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಬಡವರ ನೆರವಿಗೆ ಧಾವಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಸರ್ಕಾರ ಬಡವರಿಗಾಗಿ ವಿಶೇಷ ಕಿಟ್ ವಿತರಣೆಗೆ ಮುಂದಾಗಬೇಕಿದೆ. ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ನೊಂದವರ ಧ್ವನಿಯಾಗಿ ನಿಲ್ಲುವ ಮೂಲಕ ಆತ್ಮಸ್ಥೆöÊರ್ಯ ತುಂಬುವ ಕಾರ್ಯವಾಗಬೇಕಿದೆ ಎಂದರು.
ಗ್ರಾಪA ಸದಸ್ಯ ರಾಜಕುಮಾರ ಚೋಪಡೆ ಮಾತನಾಡಿ, ಕೋವಿಡ್ ಹೊಡೆದೂಡಿಸಲು, ಸಮುದಾಯ ಸನ್ನದ್ದರಾಗಬೇಕು. ಗ್ರಾಮೀಣ ಭಾಗದ ಜನರು ಹೆಚ್ಚಿನ ಜಾಗೃತಿ ವಹಿಸುವುದು ಅಗತ್ಯವಾಗಿದ್ದು, ಆರೋಗ್ಯದ ಹಿತ ದೃಷ್ಟಿಯಿಂದ ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ ಎಂದರು.
ಆರ್.ಕೆ ಬಾಗವಾನ, ಮೌನೇಶ ಭೋಸಲೆ, ಮಲ್ಲಿಕಾರ್ಜುನ ಗಾರಗಿ, ಆಯ್.ಎಚ್ ಬಾಗವಾನ, ಕಟ್ಟೆಪ್ಪ ಮಾದರ, ಸದಾಶಿವನಗೌಡ ಪಾಟೀಲ, ಶೇಖರಪ್ಪ ಯಗರಿ, ಕಳಕಪ್ಪ ಮೇಟಿ, ಕಳಕಪ್ಪ ಭೋಸಲೆ, ಗವಿಯಪ್ಪ ಗಾರಗಿ, ಶಿವಾಜಿ ಹೊರಪೇಟಿ ಇದ್ದರು.

Leave a Reply

Your email address will not be published. Required fields are marked *

You May Also Like

ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ:ಡಾ:ರಾಕೇಶ್

ಉತ್ತರಪ್ರಭ ಸುದ್ದಿ ನರೆಗಲ್ಲ:ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ ಹಾಗೂ ದೈಹಿಕವಾಗಿ ಮಾನಸಿಕವಾಗಿ ಮನುಷ್ಯ ಯೋಗವನ್ನು ಪ್ರತಿದಿನ…

ಹೆಚ್.ಕೆ.ವಿವೇಕಾನಂದ ಆತಂಕ

ಜಗತ್ತು ಬೆಳೆದಂತೆ ಸಂಬಂಧಗಳು ವ್ಯಾಪಾರೀಕರಣವಾಗಿ, ಮಾನವೀಯ ಮೌಲ್ಯಗಳೇ ಕುಸಿಯುತ್ತಿವೆ. ಹೀಗಾಗಿ ಸಮಾಜ ವಿನಾಶದೆಡೆಗೆ ಸಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಕೆ.ವಿವೇಕಾನಂದ ಹೇಳಿದರು.

ಲಾಕ್ ಡೌನ್ ಫ್ಲಾಪ್:ಸೋಂಕು ಸೊರಗಲಿಲ್ಲ, ಎಕಾನಮಿ ಏಳಲಿಲ್ಲ!

ಬೆಂಗಳೂರು: ಲಾಕ್ ಡೌನ್ ಉದ್ದೇಶ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವುದು. ವಾಣಿಜ್ಯ ಸೇರಿದಂತೆ ಎಲ್ಲ ಆರ್ಥಿಕ ಚಟುವಟಿಕೆಗಳು…

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…