ಗಜೇಂದ್ರಗಡ: ಸಮೀಪದ ಗೋಗೇರಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯ ಸಂಘಟನೆ ವತಿಯಿಂದ ಬಡವರಿಗೆ ಆಹಾರದ ಕಿಟ್ ವಿತರಿಸಲಾಯಿತು.
ಕರವೇ ಯುವ ಸೈನ್ಯ ರಾಜ್ಯಾಧ್ಯಕ್ಷ ಕೆ.ಎಸ್.ಕೊಡತಗೇರಿ ಮಾತನಾಡಿ, ಕೋವಿಡ್ ಎರಡಲೇ ಅಲೆ ಜನಸಾಮಾನ್ಯರನ್ನು ಬೆಂಬಿಡದೇ ಕಾಡುತ್ತಿದೆ. ಇದರಿಂದ ಬಡ ಹಾಗೂ ಮದ್ಯಮ ವರ್ಗದ ಜನರು ಬದುಕುವುದು ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಬಡವರ ನೆರವಿಗೆ ಧಾವಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಸರ್ಕಾರ ಬಡವರಿಗಾಗಿ ವಿಶೇಷ ಕಿಟ್ ವಿತರಣೆಗೆ ಮುಂದಾಗಬೇಕಿದೆ. ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ನೊಂದವರ ಧ್ವನಿಯಾಗಿ ನಿಲ್ಲುವ ಮೂಲಕ ಆತ್ಮಸ್ಥೆöÊರ್ಯ ತುಂಬುವ ಕಾರ್ಯವಾಗಬೇಕಿದೆ ಎಂದರು.
ಗ್ರಾಪA ಸದಸ್ಯ ರಾಜಕುಮಾರ ಚೋಪಡೆ ಮಾತನಾಡಿ, ಕೋವಿಡ್ ಹೊಡೆದೂಡಿಸಲು, ಸಮುದಾಯ ಸನ್ನದ್ದರಾಗಬೇಕು. ಗ್ರಾಮೀಣ ಭಾಗದ ಜನರು ಹೆಚ್ಚಿನ ಜಾಗೃತಿ ವಹಿಸುವುದು ಅಗತ್ಯವಾಗಿದ್ದು, ಆರೋಗ್ಯದ ಹಿತ ದೃಷ್ಟಿಯಿಂದ ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ ಎಂದರು.
ಆರ್.ಕೆ ಬಾಗವಾನ, ಮೌನೇಶ ಭೋಸಲೆ, ಮಲ್ಲಿಕಾರ್ಜುನ ಗಾರಗಿ, ಆಯ್.ಎಚ್ ಬಾಗವಾನ, ಕಟ್ಟೆಪ್ಪ ಮಾದರ, ಸದಾಶಿವನಗೌಡ ಪಾಟೀಲ, ಶೇಖರಪ್ಪ ಯಗರಿ, ಕಳಕಪ್ಪ ಮೇಟಿ, ಕಳಕಪ್ಪ ಭೋಸಲೆ, ಗವಿಯಪ್ಪ ಗಾರಗಿ, ಶಿವಾಜಿ ಹೊರಪೇಟಿ ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ಗದಗ ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 170…

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ಕನ್ನಡ ನಾಡು ನುಡಿಗೆ ಜಕ್ಕಲಿ ಗ್ರಾಮದ ಕೊಡುಗೆ ಅಪಾರ :ವಿವೇಕಾನಂದಗೌಡ ಪಾಟೀಲ

ಉತ್ತರಪ್ರಭ ಸುದ್ದಿ ನರೆಗಲ್ಲ: ಕನ್ನಡ ನಾಡು ನುಡಿಗೆ ಗದಗ ಜಿಲ್ಲೆಯ ಜಕ್ಕಲಿ ಗ್ರಾಮ ಅಪಾರವಾದ ಕೊಡುಗೆ…