ಗಜೇಂದ್ರಗಡ: ಸಮೀಪದ ಗೋಗೇರಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯ ಸಂಘಟನೆ ವತಿಯಿಂದ ಬಡವರಿಗೆ ಆಹಾರದ ಕಿಟ್ ವಿತರಿಸಲಾಯಿತು.
ಕರವೇ ಯುವ ಸೈನ್ಯ ರಾಜ್ಯಾಧ್ಯಕ್ಷ ಕೆ.ಎಸ್.ಕೊಡತಗೇರಿ ಮಾತನಾಡಿ, ಕೋವಿಡ್ ಎರಡಲೇ ಅಲೆ ಜನಸಾಮಾನ್ಯರನ್ನು ಬೆಂಬಿಡದೇ ಕಾಡುತ್ತಿದೆ. ಇದರಿಂದ ಬಡ ಹಾಗೂ ಮದ್ಯಮ ವರ್ಗದ ಜನರು ಬದುಕುವುದು ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಬಡವರ ನೆರವಿಗೆ ಧಾವಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಸರ್ಕಾರ ಬಡವರಿಗಾಗಿ ವಿಶೇಷ ಕಿಟ್ ವಿತರಣೆಗೆ ಮುಂದಾಗಬೇಕಿದೆ. ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ನೊಂದವರ ಧ್ವನಿಯಾಗಿ ನಿಲ್ಲುವ ಮೂಲಕ ಆತ್ಮಸ್ಥೆöÊರ್ಯ ತುಂಬುವ ಕಾರ್ಯವಾಗಬೇಕಿದೆ ಎಂದರು.
ಗ್ರಾಪA ಸದಸ್ಯ ರಾಜಕುಮಾರ ಚೋಪಡೆ ಮಾತನಾಡಿ, ಕೋವಿಡ್ ಹೊಡೆದೂಡಿಸಲು, ಸಮುದಾಯ ಸನ್ನದ್ದರಾಗಬೇಕು. ಗ್ರಾಮೀಣ ಭಾಗದ ಜನರು ಹೆಚ್ಚಿನ ಜಾಗೃತಿ ವಹಿಸುವುದು ಅಗತ್ಯವಾಗಿದ್ದು, ಆರೋಗ್ಯದ ಹಿತ ದೃಷ್ಟಿಯಿಂದ ಕಡ್ಡಾಯ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ ಎಂದರು.
ಆರ್.ಕೆ ಬಾಗವಾನ, ಮೌನೇಶ ಭೋಸಲೆ, ಮಲ್ಲಿಕಾರ್ಜುನ ಗಾರಗಿ, ಆಯ್.ಎಚ್ ಬಾಗವಾನ, ಕಟ್ಟೆಪ್ಪ ಮಾದರ, ಸದಾಶಿವನಗೌಡ ಪಾಟೀಲ, ಶೇಖರಪ್ಪ ಯಗರಿ, ಕಳಕಪ್ಪ ಮೇಟಿ, ಕಳಕಪ್ಪ ಭೋಸಲೆ, ಗವಿಯಪ್ಪ ಗಾರಗಿ, ಶಿವಾಜಿ ಹೊರಪೇಟಿ ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

ಸಂತ್ರಸ್ತರಿಗೆ ನ್ಯಾಯ ದೊರಕುವುದೇ…?

ನೌಶಾದ್ ಜನ್ನತ್ತ ಮೂಲತಃ ಕೊಡಗಿನವರು. ನೆರೆ ಸಂದರ್ಭದಿಂದ ಈವರೆಗೆ ಕೊಡುಗಿನ ನೋವಿಗೆ ತಮ್ಮ ತಂಡದೊಂದಿದೆ ಧ್ವನಿಯಾಗುತ್ತಿದ್ದಾರೆ. ನೌಶಾದ್ ಬರೆದ ಸಂತ್ರಸ್ತರಿಗೆ ನ್ಯಾಯ ದೊರಕುವುದೇ..? ಎನ್ನುವ ಲೇಖನ ನಿಮ್ಮ ಉತ್ತರಪ್ರಭದ, ಉತ್ತರ ವಿಶೇಷದಲ್ಲಿ….