ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳು ಲಾಕ್ಡೌನ್ ನಿಂದ ವಿನಾಯಿತಿ ನೀಡಿದ್ದರಿಂದ ಚುರುಕುಗೊಂಡಿವೆ. ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆಗೂ ಸರ್ಕಾರ ಅವಕಾಶ ಕಲ್ಪಿಸಿದ್ದು, ರೈಲ್ವೇ ರೇಕ್ ಗಳಲ್ಲಿ ತಂದಂತಹ ರಸಗೊಬ್ಬರ ಚೀಲಗಳನ್ನು ಅನ್ಲೋಡ್ ಅಥವಾ ಇಳಿಸಲು ಸರ್ಕಾರ ವಿಧಿಸಿರುವ ಸಮಯವನ್ನೀಗ ವಿಸ್ತರಿಸಿದೆ.

ಇಲ್ಲಿಯವರೆಗೆ ಬೆ.6 ರಿಂದ 10 ರವರೆಗೆ ಮಾರ್ಗಸೂಚಿಯನ್ನು ಹೊರಡಿಸಲಾಗಿತ್ತು. ಇದರಿಂದ ರಸಗೊಬ್ಬರ ಇಳಿಸಲು ರೈಲ್ವೆ , ಮೂಲಕ ಬಂದಂತಹ ಕೃಷಿ ಪರಿಕರಗಳನ್ನು ಸಾಗಿಸಲು ಕಷ್ಟವಾಗುತ್ತಿರುವುದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಮಾರ್ಗಸೂಚಿಯಲ್ಲಿ ಪರಿಷ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಕಡಿಮೆ ಸಮಯದಲ್ಲಿ ರಸಗೊಬ್ಬರವನ್ನು ರೈಲ್ವೇ ಮೂಲಕ ಇಳಿಸಿ ಸರಬರಾಜು ಮಾಡಲು ತೊಂದರೆಯಾಗುವುದನ್ನು ಗಮನಿಸಿದ ಸರ್ಕಾರ ಸಚಿವರ ಮನವಿ ಮೇರೆಗೆ ರೈತರಿಗೆ ಹಾಗೂ ಸರಕು ಸಾಗಣೆ ಗುತ್ತಿಗೆದಾರರಿಗೆ ತೊಂದರೆಯಾಗದಂತೆ ಇದೀಗ ರೈಲ್ವೇ ರೇಕ್ ಗಳಲ್ಲಿ ತಂದಂತಹ ರಸಗೊಬ್ಬರ ಚೀಲಗಳ ಅನ್ಲೋಡ್ ಮಾಡುವ ಸಮಯವನ್ನು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

Leave a Reply

Your email address will not be published. Required fields are marked *

You May Also Like

ಚೆನ್ನಮ್ಮ – ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಕೋಮನಿ ನಡುವೆ ಗಲಾಟೆ!

ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.

ಗದಗ, ರೋಣ, ಮುಂಡರಗಿ, ತಾಲೂಕಿನ ಕೆಲವು ಕಡೆ ಕಂಟೇನ್ಮೆಂಟ್ ಘೋಷಣೆ

ಗದಗ: ಜಿಲ್ಲೆಯ ಕೆಲವು ತಾಲೂಕಿನ ಪ್ರದೇಶಗಳನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಅದರ ವಿವರ ಈ…

ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.

ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.