ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.
ಮಧ್ಯಾಹ್ನದ ಊಟ ಯೋಜನೆಯ ಎಲ್ಲಾ ಅರ್ಹ ಮಕ್ಕಳಿಗೆ ಅಡುಗೆ ವೆಚ್ಚಕ್ಕೆ ಸಮನಾದ ಮೊತ್ತವನ್ನು ನೀಡುವ ಪ್ರಸ್ತಾಪಕ್ಕೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಅನುಮೋದನೆ ನೀಡಿದ್ದಾರೆ.
ಈ ನಿರ್ಧಾರವು ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡುವುದಲ್ಲದೆ, ಸವಾಲಿನ ಸಾಂಕ್ರಾಮಿಕ ಸಮಯದಲ್ಲಿ ಅವರ ರೋಗನಿರೋಧಕ ಶಕ್ತಿಯನ್ನು ರಕ್ಷಿಸಲು ಸಹಕಾರಿಯಾಗುತ್ತದೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಂಡಿಎ ಯೋಜನೆಯಡಿ ಸುಮಾರು 11.8 ಕೋಟಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಡಿಬಿಟಿ ಮೂಲಕ ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಟ್ವೀಟ್ ಮಾಡಿದ್ದಾರೆ. ಇದಕ್ಕಾಗಿ ಇನ್ನೂ 1200 ಕೋಟಿ ರೂಪಾಯಿಗಳನ್ನು ನಿಧಿಯಲ್ಲಿ ನೀಡಲಾಗುವುದು ಎಂದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಸ್ತೂರಿ ರಂಗನ್ ವರದಿ: ಭಿನ್ನಾಭಿಪ್ರಾಯ ದಾಖಲಿಸಿದ ಬಿ.ಎಸ್.ವೈ.

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಕಸ್ತೂರಿರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ…

ಹೆತ್ತವರನ್ನೇ ಹತ್ಯೆಗೈದ ಪಾಪಿ ಮಗ..!

ತಂದೆ ತಾಯಿಯೇ ದೇವರು ಎಂದು ಪೂಜಿಸುವ ಈ ಕಾಲದಲ್ಲಿ ಇಲ್ಲೋಬ್ಬ ಪಾಪಿ ಮಗನೊಬ್ಬ ತನ್ನ ಹೆತ್ತವರನ್ನೇ ಕಬ್ಬಿಣದ ರಾಡ್​​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.