ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.
ಮಧ್ಯಾಹ್ನದ ಊಟ ಯೋಜನೆಯ ಎಲ್ಲಾ ಅರ್ಹ ಮಕ್ಕಳಿಗೆ ಅಡುಗೆ ವೆಚ್ಚಕ್ಕೆ ಸಮನಾದ ಮೊತ್ತವನ್ನು ನೀಡುವ ಪ್ರಸ್ತಾಪಕ್ಕೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಅನುಮೋದನೆ ನೀಡಿದ್ದಾರೆ.
ಈ ನಿರ್ಧಾರವು ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡುವುದಲ್ಲದೆ, ಸವಾಲಿನ ಸಾಂಕ್ರಾಮಿಕ ಸಮಯದಲ್ಲಿ ಅವರ ರೋಗನಿರೋಧಕ ಶಕ್ತಿಯನ್ನು ರಕ್ಷಿಸಲು ಸಹಕಾರಿಯಾಗುತ್ತದೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಂಡಿಎ ಯೋಜನೆಯಡಿ ಸುಮಾರು 11.8 ಕೋಟಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಡಿಬಿಟಿ ಮೂಲಕ ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಟ್ವೀಟ್ ಮಾಡಿದ್ದಾರೆ. ಇದಕ್ಕಾಗಿ ಇನ್ನೂ 1200 ಕೋಟಿ ರೂಪಾಯಿಗಳನ್ನು ನಿಧಿಯಲ್ಲಿ ನೀಡಲಾಗುವುದು ಎಂದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ ಮಗ!

ಪಾಟ್ನಾ : ತಂದೆಯ ರುಂಡವನ್ನೇ ಮಗ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರತಾಪಗೌಡ ಪಾಟೀಲ ಉಪ ಚುನಾವಣೆಯಲ್ಲಿ ಗೆದ್ದರೆ ಸಚಿವ ಸ್ಥಾನ

ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

ಆರ್ ಸಿಬಿ ಈ ಬಾರಿ ಕಪ್ ಗೆಲ್ಲುವುದಿಲ್ಲವಂತೆ!? ಕಾರಣವೇನು ಗೊತ್ತಾ?

ಅಬುಧಾಬಿ : ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕೊನೆಯ ಹಂತದಲ್ಲಿ ವೈಫಲ್ಯ ಅನುಭವಿಸಿತು. ಆದರೂ ಪ್ಲೇ ಆಫ್ ಹಂತ ತಲುಪಿದೆ. ಹೀಗಾಗಿ ಸದ್ಯ ಆರ್ ಸಿಬಿ ಕಪ್ ಗೆಲ್ಲುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

ಮುಂಡರಗಿ: ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು

ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಮುಂಡರಗಿ-ಬೂದಿಹಾಳ ರಸ್ತೆ ಮದ್ಯೆದಲ್ಲಿ ಅಪಘಾತ ಸಂಭವಿಸಿದ್ದು ರಾಮಚಂದ್ರ ಕಮ್ಮಾರ(36) ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ. ಮುಂಡರಗಿ ಪೊಲೀಸ್ ಟಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.